ವ್ಯಾಕ್ಸಿನೇಟ್ ಇಂಡಿಯಾಗೆ ಚಾಲನೆ ನೀಡಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ‘ಕೋವಿಡ್ ಕಡಿಮೆ ಆಗಿದೆ ಎಂದು ಸಾರ್ವಜನಿಕರು ಮೈಮರೆಯಬಾರದು, ಕಡ್ಡಾಯವಾಗಿ ಆರು ಅಡಿ ಅಂತರ ಕಾಯ್ದುಕೊಳ್ಳಬೇಕು. ಮಾಸ್ಕ್ ಧರಿಸುವುದನ್ನು ಬಿಡಬಾರದು. ಲಸಿಕೆ ಹಾಕಿಸಿಕೊಳ್ಳುವುದು ಕಡ್ಡಾಯ. ಲಸಿಕೆಗೆ ಪರ್ಯಾಯ ಯಾವುದೂ ಇಲ್ಲ. ಜಂಕ್ ಫುಡ್ ಸೇವಿಸದೇ ಭಾರತೀಯ ಸಾಂಪ್ರದಾಯಿಕ ಆಹಾರ ಸೇವಿಸುವುದು ಉತ್ತಮ’ ಎಂದು ಸಲಹೆ ನೀಡಿದರು.