<p>ಮೇಲುಕೋಟೆ (ಮಂಡ್ಯ ಜಿಲ್ಲೆ): ಇಲ್ಲಿಯ ಚೆಲುವನಾಯಾರಣಸ್ವಾಮಿ ದೇವಾಲಯದಲ್ಲಿ ಏ.1ರಂದು ನಡೆಯಲಿರುವ ವಿಶ್ವವಿಖ್ಯಾತ ವೈರಮುಡಿ ಉತ್ಸವದ ಅಂಗವಾಗಿ ಸೋಮವಾರ ಅಂಕುರಾರ್ಪಣದೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡವು.</p>.<p>ಸೋಮವಾರ ನಸುಕಿನಿಂದಲೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಮಾರ್ಚ್ 28ರಂದು ಗರುಡ ಧ್ವಜಾರೋಹಣದ ಮೂಲಕ ವಿಧ್ಯುಕ್ತವಾಗಿ ವೈರಮುಡಿ ಬ್ರಹ್ಮೋತ್ಸವಕ್ಕೆ ಚಾಲನೆ ದೊರೆಯಲಿದೆ. ಮಾರ್ಚ್ 28 ರಂದು ಕಲ್ಯಾಣೋತ್ಸವ, ಮಾರ್ಚ್ 29ಕ್ಕೆ ರಾಮಾನುಜಾಚಾರ್ಯರಿಗೆ ಅಭಿಷೇಕ, ಯಾಗಶಾಲಾ ಪ್ರವೇಶ, ಮಾರ್ಚ್ 30ರಂದು ಶ್ರೀರಾಮನವಮಿ , ಶೇಷವಾಹನೋತ್ಸವ, ಮಾರ್ಚ್31 ರಂದು ನಾಗವಲ್ಲಿ ಮಹೋತ್ಸವ, ಚಂದ್ರಮಂಡಲ ವಾಹನೋತ್ಸವ ನಡೆಯಲಿವೆ.</p>.<p>ಏ.1ರಂದು ವೈರಮುಡಿ ಉತ್ಸವ ನಡೆಯಲಿದ್ದು ಚೆಲುನಾರಾಯಣಸ್ವಾಮಿಗೆ ವಜ್ರಖಚಿತ ಕೀರಿಟ ಧಾರಣೆ ಮಾಡಲಾಗುತ್ತದೆ. ಅಂದು ಬೆಳಿಗ್ಗೆ 6.30ಕ್ಕೆ ಮಂಡ್ಯದ ಜಿಲ್ಲಾ ಖಜಾನೆಯಲ್ಲಿರುವ ವೈರಮುಡಿ ಹಾಗೂ ರಾಜಮುಡಿ ತಿರುವಾಭರಣಗಳ ಪೆಟ್ಟಿಗೆ ತೆರೆಯಲಾಗುತ್ತದೆ.</p>.<p>ಮಂಡ್ಯದ ಲಕ್ಷ್ಮಿಜನಾರ್ದನ ದೇಗುಲದಲ್ಲಿ ಪ್ರಥಮ ಪೂಜೆ ಸಲ್ಲಿಸಿದ ಬಳಿಕ ಮೇಲುಕೋಟೆಗೆ ಮೆರವಣಿಗೆ ಮೂಲಕ ಕೊಂಡೊಯ್ಯಲಾಗುತ್ತದೆ. ರಾತ್ರಿ 8.45ಕ್ಕೆ ಆರಂಭವಾಗುವ ವೈರಮುಡಿ ಉತ್ಸವ ಏ.2ರ ಸುಕಿನವರೆಗೂ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೇಲುಕೋಟೆ (ಮಂಡ್ಯ ಜಿಲ್ಲೆ): ಇಲ್ಲಿಯ ಚೆಲುವನಾಯಾರಣಸ್ವಾಮಿ ದೇವಾಲಯದಲ್ಲಿ ಏ.1ರಂದು ನಡೆಯಲಿರುವ ವಿಶ್ವವಿಖ್ಯಾತ ವೈರಮುಡಿ ಉತ್ಸವದ ಅಂಗವಾಗಿ ಸೋಮವಾರ ಅಂಕುರಾರ್ಪಣದೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡವು.</p>.<p>ಸೋಮವಾರ ನಸುಕಿನಿಂದಲೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಮಾರ್ಚ್ 28ರಂದು ಗರುಡ ಧ್ವಜಾರೋಹಣದ ಮೂಲಕ ವಿಧ್ಯುಕ್ತವಾಗಿ ವೈರಮುಡಿ ಬ್ರಹ್ಮೋತ್ಸವಕ್ಕೆ ಚಾಲನೆ ದೊರೆಯಲಿದೆ. ಮಾರ್ಚ್ 28 ರಂದು ಕಲ್ಯಾಣೋತ್ಸವ, ಮಾರ್ಚ್ 29ಕ್ಕೆ ರಾಮಾನುಜಾಚಾರ್ಯರಿಗೆ ಅಭಿಷೇಕ, ಯಾಗಶಾಲಾ ಪ್ರವೇಶ, ಮಾರ್ಚ್ 30ರಂದು ಶ್ರೀರಾಮನವಮಿ , ಶೇಷವಾಹನೋತ್ಸವ, ಮಾರ್ಚ್31 ರಂದು ನಾಗವಲ್ಲಿ ಮಹೋತ್ಸವ, ಚಂದ್ರಮಂಡಲ ವಾಹನೋತ್ಸವ ನಡೆಯಲಿವೆ.</p>.<p>ಏ.1ರಂದು ವೈರಮುಡಿ ಉತ್ಸವ ನಡೆಯಲಿದ್ದು ಚೆಲುನಾರಾಯಣಸ್ವಾಮಿಗೆ ವಜ್ರಖಚಿತ ಕೀರಿಟ ಧಾರಣೆ ಮಾಡಲಾಗುತ್ತದೆ. ಅಂದು ಬೆಳಿಗ್ಗೆ 6.30ಕ್ಕೆ ಮಂಡ್ಯದ ಜಿಲ್ಲಾ ಖಜಾನೆಯಲ್ಲಿರುವ ವೈರಮುಡಿ ಹಾಗೂ ರಾಜಮುಡಿ ತಿರುವಾಭರಣಗಳ ಪೆಟ್ಟಿಗೆ ತೆರೆಯಲಾಗುತ್ತದೆ.</p>.<p>ಮಂಡ್ಯದ ಲಕ್ಷ್ಮಿಜನಾರ್ದನ ದೇಗುಲದಲ್ಲಿ ಪ್ರಥಮ ಪೂಜೆ ಸಲ್ಲಿಸಿದ ಬಳಿಕ ಮೇಲುಕೋಟೆಗೆ ಮೆರವಣಿಗೆ ಮೂಲಕ ಕೊಂಡೊಯ್ಯಲಾಗುತ್ತದೆ. ರಾತ್ರಿ 8.45ಕ್ಕೆ ಆರಂಭವಾಗುವ ವೈರಮುಡಿ ಉತ್ಸವ ಏ.2ರ ಸುಕಿನವರೆಗೂ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>