<p><strong>ಬೆಂಗಳೂರು:</strong> ಮಹರ್ಷಿ ವಾಲ್ಮೀಕಿ ಜಯಂತಿಯ ಅಂಗವಾಗಿ ನೀಡುವ ‘ಶ್ರೀಮಹರ್ಷಿ ವಾಲ್ಮೀಕಿ ಪ್ರಶಸ್ತಿ’ಗೆ 2020 ರ ಸಾಲಿಗೆ ಐದು ಸಾಧಕರು ಮತ್ತು 2021 ನೇ ಸಾಲಿಗೆ ಆರು ಸಾಧಕರು ಸೇರಿ ಒಟ್ಟು 11 ಜನರನ್ನು ಆಯ್ಕೆ ಮಾಡಲಾಗಿದೆ.</p>.<p>ಪರಿಶಿಷ್ಟ ಕಲ್ಯಾಣ ಮತ್ತು ಸಾರಿಗೆ ಸಚಿವ ಬಿ.ಶ್ರೀರಾಮುಲು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.</p>.<p>ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಬುಧವಾರ ಬೆಳಿಗ್ಗೆ 11 ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಪ್ರಶಸ್ತಿ ಪುರಸ್ಕೃತರಿಗೆ ₹5 ಲಕ್ಷ ನಗದು, 20 ಗ್ರಾಂ ಚಿನ್ನದ ಪದಕದ ಜೊತೆಗೆ ಫಲಕವನ್ನು ನೀಡಲಾಗುವುದು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡುವರು.</p>.<p class="Subhead"><strong>2021 ನೇ ಸಾಲಿನ ಪ್ರಶಸ್ತಿ</strong></p>.<p class="Subhead"><span class="Bullet">l</span>ಕೆ. ಸಿ ನಾಗರಾಜು (ಸಮಾಜ ಸೇವೆ), ಮಧುಗಿರಿ ತಾಲ್ಲೂಕಿನ ಇವರು ಸಂಘ–ಸಂಸ್ಥೆಗಳ ಮೂಲಕ ಜನಪರ ಕಾರ್ಯಕ್ರಮ ಮತ್ತು ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದಾರೆ.<br />*ಲಕ್ಷ್ಮಿ ಗಣಪತಿ ಸಿದ್ದಿ ( ಸಮಾಜ ಸೇವೆ),ಉತ್ತರಕನ್ನಡ ಜಿಲ್ಲೆಯ ಇವರು 35 ವರ್ಷಗಳಿಂದ ನಾಟಿ ವೈದ್ಯೆಯಾಗಿ 300 ಕ್ಕೂ ಹೆಚ್ಚು ಹೆರಿಗೆ ಮಾಡಿಸಿದ್ದಾರೆ.</p>.<p class="Subhead"><span class="Bullet">l</span>ಪ್ರೊ.ಎಸ್.ಆರ್.ನಿರಂಜನ (ಶಿಕ್ಷಣ ಕ್ಷೇತ್ರ), ಮೈಸೂರಿನ ಇವರು ವಿಜ್ಞಾನ ಕ್ಷೇತ್ರದಲ್ಲಿ ಹಲವು ಸಂಶೋಧನೆಗಳನ್ನು ನಡೆಸಿ, ಹಕ್ಕುಸ್ವಾಮ್ಯಗಳನ್ನು ಪಡೆದಿದ್ದಾರೆ.</p>.<p class="Subhead"><span class="Bullet">l</span>ಭಟ್ರಹಳ್ಳಿ ಗೂಳಪ್ಪ (ಸಮಾಜ ಸೇವೆ) ಬಳ್ಳಾರಿ ಜಿಲ್ಲೆ ಕೂಡ್ಲಗಿ ತಾಲ್ಲೂಕಿನವರಾದ ಇವರು, 35 ವರ್ಷಗಳಿಂದ 75 ಎಕರೆಯಲ್ಲಿ ಅರಣ್ಯ ಬೆಳೆಸಿದ್ದಾರೆ.</p>.<p class="Subhead"><span class="Bullet">l</span>ಅಶ್ವತ್ಥರಾಮಯ್ಯ (ಸಮಾಜ ಸೇವೆ) ಬೆಂಗಳೂರಿನ ಇವರು ವಾಲ್ಮೀಕಿ ಸಮಾಜದ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಶ್ರಮಿಸಿದ್ದಾರೆ.</p>.<p class="Subhead"><span class="Bullet">l</span>ಜಂಬಯ್ಯ ನಾಯಕ (ಸಮಾಜ ಸೇವೆ), ಹೊಸಪೇಟೆಯವರಾದ ಇವರು, ಪರಿಶಿಷ್ಟ ಪಂಗಡಗಳ ಜನಾಂಗದವರ ಶ್ರೇಯೋಭಿವೃದ್ಧಿಗಾಗಿ ಸೇವೆ ಸಲ್ಲಿಸಿದ್ದಾರೆ.</p>.<p class="Subhead"><strong>2020 ನೇ ಸಾಲಿನ ಪ್ರಶಸ್ತಿ:</strong></p>.<p class="Subhead"><span class="Bullet">l</span>ಡಾ.ಕೆ.ಆರ್.ಪಾಟೀಲ, ಹುಬ್ಬಳ್ಳಿಯ ಇವರು ಬುಡಕಟ್ಟು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ನೆರವಾಗಿದ್ದಾರೆ. ಧಾರವಾಡ ಮತ್ತು ವಿಜಯನಗರದಲ್ಲಿ ಬುಡಕಟ್ಟು ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸ್ಥಾಪಿಸಿ ವಿದ್ಯಾರ್ಥಿಗಳಿಗೆ ನೆರವಾಗಿದ್ದಾರೆ.</p>.<p class="Subhead"><span class="Bullet">l</span>ಬಿ.ಎಲ್.ವೇಣು (ಸಾಹಿತ್ಯ), ಇವರು ಸಾಹಿತ್ಯ ಮತ್ತು ಚಲನಚಿತ್ರ ಕ್ಷೇತ್ರಗಳಲ್ಲಿ ಗಣನೀಯ ಕೊಡುಗೆ ನೀಡಿದ್ದಾರೆ.</p>.<p class="Subhead"><span class="Bullet">l</span>ಗೌರಿ ಕೊರಗ (ಸಮಾಜ ಸೇವೆ), ಉಡುಪಿ ಜಿಲ್ಲೆ ಬ್ರಹ್ಮಾವರ ತಾಲ್ಲೂಕಿನ ಇವರು, ಕೊರಗ ಜನಾಂಗದ ಅಭ್ಯುದಯಕ್ಕೆ ಅನೇಕ ಕಾರ್ಯಕ್ರಮಗಳನ್ನು ರೂಪಿಸಿ, ಚಳವಳಿಗಳ ಮೂಲಕ ಸಮುದಾಯದ ಅಭಿವೃದ್ಧಿಗೆ ಶ್ರಮಿಸಿದ್ದಾರೆ.</p>.<p class="Subhead"><span class="Bullet">l</span>ಮಾರಪ್ಪ ನಾಯಕ (ಸಂಘಟನೆ) ಇವರು ಪರಿಶಿಷ್ಟ ಪಂಗಡದ ಜನರ ಶ್ರೇಯೋಭಿವೃದ್ಧಿಗಾಗಿ ಸರ್ಕಾರದ ಪ್ರಮುಖ ಯೋಜನೆಗಳಾದ ಗಂಗಾ ಕಲ್ಯಾಣ, ಭೂ ಒಡೆತನ, ಏತ ನೀರಾವರಿ ಯೋಜನೆಗಳ ಸಮರ್ಪಕ ಜಾರಿ ತರಲು ಶ್ರಮಿಸಿದ್ದಾರೆ.</p>.<p class="Subhead"><span class="Bullet">l</span>ತಿಪ್ಪೇಸ್ವಾಮಿ ಎಚ್. (ಸಿರಿಗೆರೆ ತಿಪ್ಪೇಶ್),(ಸಮಾಜ ಸೇವೆ), ವಾಲ್ಮೀಕಿ ಸಮಾಜಕ್ಕೆ ನ್ಯಾಯ ಒದಗಿಸಲು ಅನೇಕ ಹೋರಾಟಗಳನ್ನು ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮಹರ್ಷಿ ವಾಲ್ಮೀಕಿ ಜಯಂತಿಯ ಅಂಗವಾಗಿ ನೀಡುವ ‘ಶ್ರೀಮಹರ್ಷಿ ವಾಲ್ಮೀಕಿ ಪ್ರಶಸ್ತಿ’ಗೆ 2020 ರ ಸಾಲಿಗೆ ಐದು ಸಾಧಕರು ಮತ್ತು 2021 ನೇ ಸಾಲಿಗೆ ಆರು ಸಾಧಕರು ಸೇರಿ ಒಟ್ಟು 11 ಜನರನ್ನು ಆಯ್ಕೆ ಮಾಡಲಾಗಿದೆ.</p>.<p>ಪರಿಶಿಷ್ಟ ಕಲ್ಯಾಣ ಮತ್ತು ಸಾರಿಗೆ ಸಚಿವ ಬಿ.ಶ್ರೀರಾಮುಲು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.</p>.<p>ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಬುಧವಾರ ಬೆಳಿಗ್ಗೆ 11 ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಪ್ರಶಸ್ತಿ ಪುರಸ್ಕೃತರಿಗೆ ₹5 ಲಕ್ಷ ನಗದು, 20 ಗ್ರಾಂ ಚಿನ್ನದ ಪದಕದ ಜೊತೆಗೆ ಫಲಕವನ್ನು ನೀಡಲಾಗುವುದು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡುವರು.</p>.<p class="Subhead"><strong>2021 ನೇ ಸಾಲಿನ ಪ್ರಶಸ್ತಿ</strong></p>.<p class="Subhead"><span class="Bullet">l</span>ಕೆ. ಸಿ ನಾಗರಾಜು (ಸಮಾಜ ಸೇವೆ), ಮಧುಗಿರಿ ತಾಲ್ಲೂಕಿನ ಇವರು ಸಂಘ–ಸಂಸ್ಥೆಗಳ ಮೂಲಕ ಜನಪರ ಕಾರ್ಯಕ್ರಮ ಮತ್ತು ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದಾರೆ.<br />*ಲಕ್ಷ್ಮಿ ಗಣಪತಿ ಸಿದ್ದಿ ( ಸಮಾಜ ಸೇವೆ),ಉತ್ತರಕನ್ನಡ ಜಿಲ್ಲೆಯ ಇವರು 35 ವರ್ಷಗಳಿಂದ ನಾಟಿ ವೈದ್ಯೆಯಾಗಿ 300 ಕ್ಕೂ ಹೆಚ್ಚು ಹೆರಿಗೆ ಮಾಡಿಸಿದ್ದಾರೆ.</p>.<p class="Subhead"><span class="Bullet">l</span>ಪ್ರೊ.ಎಸ್.ಆರ್.ನಿರಂಜನ (ಶಿಕ್ಷಣ ಕ್ಷೇತ್ರ), ಮೈಸೂರಿನ ಇವರು ವಿಜ್ಞಾನ ಕ್ಷೇತ್ರದಲ್ಲಿ ಹಲವು ಸಂಶೋಧನೆಗಳನ್ನು ನಡೆಸಿ, ಹಕ್ಕುಸ್ವಾಮ್ಯಗಳನ್ನು ಪಡೆದಿದ್ದಾರೆ.</p>.<p class="Subhead"><span class="Bullet">l</span>ಭಟ್ರಹಳ್ಳಿ ಗೂಳಪ್ಪ (ಸಮಾಜ ಸೇವೆ) ಬಳ್ಳಾರಿ ಜಿಲ್ಲೆ ಕೂಡ್ಲಗಿ ತಾಲ್ಲೂಕಿನವರಾದ ಇವರು, 35 ವರ್ಷಗಳಿಂದ 75 ಎಕರೆಯಲ್ಲಿ ಅರಣ್ಯ ಬೆಳೆಸಿದ್ದಾರೆ.</p>.<p class="Subhead"><span class="Bullet">l</span>ಅಶ್ವತ್ಥರಾಮಯ್ಯ (ಸಮಾಜ ಸೇವೆ) ಬೆಂಗಳೂರಿನ ಇವರು ವಾಲ್ಮೀಕಿ ಸಮಾಜದ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಶ್ರಮಿಸಿದ್ದಾರೆ.</p>.<p class="Subhead"><span class="Bullet">l</span>ಜಂಬಯ್ಯ ನಾಯಕ (ಸಮಾಜ ಸೇವೆ), ಹೊಸಪೇಟೆಯವರಾದ ಇವರು, ಪರಿಶಿಷ್ಟ ಪಂಗಡಗಳ ಜನಾಂಗದವರ ಶ್ರೇಯೋಭಿವೃದ್ಧಿಗಾಗಿ ಸೇವೆ ಸಲ್ಲಿಸಿದ್ದಾರೆ.</p>.<p class="Subhead"><strong>2020 ನೇ ಸಾಲಿನ ಪ್ರಶಸ್ತಿ:</strong></p>.<p class="Subhead"><span class="Bullet">l</span>ಡಾ.ಕೆ.ಆರ್.ಪಾಟೀಲ, ಹುಬ್ಬಳ್ಳಿಯ ಇವರು ಬುಡಕಟ್ಟು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ನೆರವಾಗಿದ್ದಾರೆ. ಧಾರವಾಡ ಮತ್ತು ವಿಜಯನಗರದಲ್ಲಿ ಬುಡಕಟ್ಟು ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸ್ಥಾಪಿಸಿ ವಿದ್ಯಾರ್ಥಿಗಳಿಗೆ ನೆರವಾಗಿದ್ದಾರೆ.</p>.<p class="Subhead"><span class="Bullet">l</span>ಬಿ.ಎಲ್.ವೇಣು (ಸಾಹಿತ್ಯ), ಇವರು ಸಾಹಿತ್ಯ ಮತ್ತು ಚಲನಚಿತ್ರ ಕ್ಷೇತ್ರಗಳಲ್ಲಿ ಗಣನೀಯ ಕೊಡುಗೆ ನೀಡಿದ್ದಾರೆ.</p>.<p class="Subhead"><span class="Bullet">l</span>ಗೌರಿ ಕೊರಗ (ಸಮಾಜ ಸೇವೆ), ಉಡುಪಿ ಜಿಲ್ಲೆ ಬ್ರಹ್ಮಾವರ ತಾಲ್ಲೂಕಿನ ಇವರು, ಕೊರಗ ಜನಾಂಗದ ಅಭ್ಯುದಯಕ್ಕೆ ಅನೇಕ ಕಾರ್ಯಕ್ರಮಗಳನ್ನು ರೂಪಿಸಿ, ಚಳವಳಿಗಳ ಮೂಲಕ ಸಮುದಾಯದ ಅಭಿವೃದ್ಧಿಗೆ ಶ್ರಮಿಸಿದ್ದಾರೆ.</p>.<p class="Subhead"><span class="Bullet">l</span>ಮಾರಪ್ಪ ನಾಯಕ (ಸಂಘಟನೆ) ಇವರು ಪರಿಶಿಷ್ಟ ಪಂಗಡದ ಜನರ ಶ್ರೇಯೋಭಿವೃದ್ಧಿಗಾಗಿ ಸರ್ಕಾರದ ಪ್ರಮುಖ ಯೋಜನೆಗಳಾದ ಗಂಗಾ ಕಲ್ಯಾಣ, ಭೂ ಒಡೆತನ, ಏತ ನೀರಾವರಿ ಯೋಜನೆಗಳ ಸಮರ್ಪಕ ಜಾರಿ ತರಲು ಶ್ರಮಿಸಿದ್ದಾರೆ.</p>.<p class="Subhead"><span class="Bullet">l</span>ತಿಪ್ಪೇಸ್ವಾಮಿ ಎಚ್. (ಸಿರಿಗೆರೆ ತಿಪ್ಪೇಶ್),(ಸಮಾಜ ಸೇವೆ), ವಾಲ್ಮೀಕಿ ಸಮಾಜಕ್ಕೆ ನ್ಯಾಯ ಒದಗಿಸಲು ಅನೇಕ ಹೋರಾಟಗಳನ್ನು ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>