ಸ್ವಾಮೀಜಿಗೆ ಬೆಂಬಲ ವ್ಯಕ್ತಪಡಿಸಿ ಹಲವು ಮುಖಂಡರು, ಸಾಹಿತಿಗಳು ಧರಣಿ ಸ್ಥಳಕ್ಕೆ ಭೇಟಿ ನೀಡಿದರು. ‘ಸರ್ಕಾರ ಸಮಾಜದ ಬೇಡಿಕೆಗೆ ಸ್ಪಂದಿಸಬೇಕು. ಶ್ರೀಗಳೇ ಸಮಾಜಕ್ಕಾಗಿ ಧರಣಿ ನಡೆಸುವ ಪರಿಸ್ಥಿತಿ ಸೃಷ್ಟಿಯಾಗಿದೆ. ಹೀಗಾಗಿ, ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಸಾಹಿತಿ ಕಮಲಾ ಹಂಪನಾ ಒತ್ತಾಯಿಸಿದರು.