‘ಕೋಲಾರದ ಬೆಗ್ಲಹೊಸಹಳ್ಳಿ ಗ್ರಾಮದ ಬಳಿ ಇರುವ ಫಾರ್ಮ್ ಹೌಸ್ನಿಂದ ಕಾರು ಚಾಲಕ ಸುನೀಲ್ ಸಮೇತ ಪ್ರಕಾಶ್ ಅವರನ್ನು, 8 ದುಷ್ಕರ್ಮಿಗಳ ತಂಡ ಅಪಹರಣ ಮಾಡಿತ್ತು. ನಂತರ, ಹಲ್ಲೆ ಸಹ ಮಾಡಿದೆ. ಬಿಡುಗಡೆಗೆ ₹30 ಕೋಟಿಗೆ ದುಷ್ಕರ್ಮಿಗಳು ಬೇಡಿಕೆ ಇಟ್ಟಿದ್ದರು ಎಂದು ಗೊತ್ತಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.