ಮಂಗಳೂರು: ‘ಕಾಲೇಜಿನ ಪಾಠ, ಕೋಚಿಂಗ್ ಹಾಗೂ ಪ್ರತಿದಿನದ ಓದು ರ್ಯಾಂಕ್ ಬರಲು ಸಹಕಾರಿಯಾಯಿತು. ಉಳಿದ ಆಕರ್ಷಣೆಗಳನ್ನು ಬದಿಗೊತ್ತಿ, ಓದಿನಲ್ಲಿ ಏಕಾಗ್ರತೆ ಬೆಳೆಸಿಕೊಂಡರೆ, ರ್ಯಾಂಕ್ ಗಳಿಸುವುದು ಕಷ್ಟವಲ್ಲ. ರ್ಯಾಂಕ್ ನಿರೀಕ್ಷಿಸಿದ್ದೆ’ ಎಂದು ಸಿಇಟಿ ಪರೀಕ್ಷೆಯ ಕೃಷಿ ವಿಭಾಗದಲ್ಲಿ ಮೊದಲ ರ್ಯಾಂಕ್ ಪಡೆದಿರುವ ಇಲ್ಲಿನ ಎಕ್ಸ್ಪರ್ಟ್ ಕಾಲೇಜಿನ ವಿದ್ಯಾರ್ಥಿ ವರುಣ್ ಗೌಡ ಪ್ರತಿಕ್ರಿಯಿಸಿದರು.