‘ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟ ಎಂದು ರಾಷ್ಟ್ರಕವಿ ಕುವೆಂಪು ಬಣ್ಣಿಸಿದ್ದರು. ಆದರೆ, ಈಗ ಇಲ್ಲಿ ಏನಾಗುತ್ತಿದೆ ಎಂಬುದು ಅರ್ಥವಾಗುತ್ತಿಲ್ಲ. ನಾವು ರಾಜ್ಯವನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದ್ದೇವೆ ಎಂದು ಕೆಲವರು ಭಾವಿಸಿದ್ದಾರೆ. ಹಿಜಾಬ್, ದೇವಸ್ಥಾನ, ಹಲಾಲ್ ಕಟ್, ಜಟ್ಕಾ ಕಟ್ ಆಯಿತು. ಈಗ ಮಾವಿನ ಹಣ್ಣು ಬಂದಿದೆ. ನನ್ನ ತೋಟದ ಮಾವಿನ ಹಣ್ಣನ್ನು ಮುಸ್ಲಿಮರಿಗೆ ಕೊಟ್ಟಿದ್ದೇನೆ’ ಎಂದು ವಾಟಾಳ್ ಹೇಳಿದರು.