ನಾಗಮಂಗಲ ತಾಲ್ಲೂಕು ಚೀಣ್ಯ ಗ್ರಾಮದ ಬಳಿ ಹಾಕಲಾಗಿದ್ದ ಫ್ಲೆಕ್ಸ್ನಲ್ಲಿ ಬೆಂಗಳೂರು ಶಾಂತಿನಗರ ಶಾಸಕ ಹ್ಯಾರಿಸ್ ಕಡೆಯವರು ಹಾಕಿಸಿದ್ದ ಫ್ಲೆಕ್ಸ್ನಲ್ಲಿ ಸಾವರ್ಕರ್ ಭಾವಚಿತ್ರ ಇತ್ತು. ಒಂದು ಕಡೆ ಸಿದ್ದರಾಮಯ್ಯ, ಇನ್ನೊಂದು ಕಡೆ ಡಿ.ಕೆ.ಶಿವಕುಮಾರ್ ಸಣ್ಣ ಭಾವಚಿತ್ರಗಳಿದ್ದವು. ನಡುವೆ ದೊಡ್ಡದಾಗಿ ವಿ.ಡಿ.ಸಾರ್ವರ್ಕರ್ ಭಾವಚಿತ್ರ ಇತ್ತು. ಜೊತೆಗೆ ರಾಹುಲ್ ಗಾಂಧಿ ನಿಂತಿರುವ ಚಿತ್ರವಿತ್ತು. ಕಾಂಗ್ರೆಸ್ ಕಾರ್ಯಕರ್ತರಿಗೆ ತಪ್ಪಿನ ಅರಿವಾಗಿ ಫ್ಲೆಕ್ಸ್ ತೆರವುಗೊಳಿಸುವ ವೇಳೆಗಾಗಲೇ ಆ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು.