ಕೆಲ ತಿಂಗಳ ಹಿಂದೆಯೇ ಗ್ರಾಮೀಣಾಭಿವೃದ್ಧಿ ಇಲಾಖೆ ಹೊರಡಿಸಿದ್ದ ಈ ಆದೇಶದ ಅನ್ವಯ ಇತರೆ ಮಕ್ಕಳಂತೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮಕ್ಕಳಿಗೂ ವೇದಗಣಿತ ಕಲಿಕೆಗೆ ಅವಕಾಶ ಮಾಡಿಕೊಡಲುಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದೆ. ಆಯಾ ಗ್ರಾಮ ಪಂಚಾಯತಿಗಳು ನೀಡಿದ ಅನುದಾನ ಬಳಸಿಕೊಂಡು ಸ್ಥಳೀಯ ಅಕಾಡೆಮಿ, ಶಿಕ್ಷಣ ಸಂಸ್ಥೆಗಳ ಸಹಯೋಗದಲ್ಲಿ ಕಲಿಕೆ ಆರಂಭಿಸಲಾಗಿದೆ. ಸರ್ಕಾರಿ ಶಾಲೆಯ ಶಿಕ್ಷಕರಿಗೂ ಅಗತ್ಯ ತರಬೇತಿ ನೀಡುತ್ತಿದ್ದು, ತರಗತಿಗಳಿಗೆ ನಿಯೋಜಿಸಲಾಗುತ್ತಿದೆ.