‘ಸಮೀಕ್ಷೆ ವೈಜ್ಞಾನಿಕವಾಗಿ ಮತ್ತು ಪಾರದರ್ಶಕವಾಗಿ ನಡೆದಿಲ್ಲ. ರಾಜ್ಯದ ವಿವಿಧ ಜಿಲ್ಲೆಗಳು ಮತ್ತು ಹೊರ ರಾಜ್ಯಗಳಿಗೆ ಗುಳೆ ಹೋದವರನ್ನು ಸಮೀಕ್ಷೆಯಲ್ಲಿ ಪರಿಗಣಿಸಿಲ್ಲ. ವೀರಶೈವ– ಲಿಂಗಾಯತರಲ್ಲೂ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದವರು ಇದ್ದಾರೆ. ಈಗ ಮಾಡಿರುವ ಸಮೀಕ್ಷೆಯ ವರದಿಯನ್ನು ಒಪ್ಪಿಕೊಂಡರೆ ಸಮುದಾಯದ ಲಕ್ಷಾಂತರ ಮಂದಿಗೆ ಅನ್ಯಾಯವಾಗುತ್ತದೆ’ ಎಂದು ಮಹಾಸಭಾದ ಉಪಾಧ್ಯಕ್ಷ ಬಿ.ಎಸ್. ಸಚ್ಚಿದಾನಂದಮೂರ್ತಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.