ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಎಸ್‌ವೈ ಪದಚ್ಯುತಿಗೊಳಿಸಿದರೆ ದಂಗೆ: ವೀರಶೈವ ಮಹಾಸಭಾ ಅಧ್ಯಕ್ಷ ಎನ್‌.ತಿಪ್ಪಣ್ಣ

ಮುಖ್ಯಮಂತ್ರಿ ವೀರಶೈವ ಮಹಾಸಭಾದ ಬೆಂಬಲ
Last Updated 23 ಜುಲೈ 2021, 17:20 IST
ಅಕ್ಷರ ಗಾತ್ರ

ಬಳ್ಳಾರಿ: ‘ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿ, ಬೆಳೆಸಿ ಅಧಿಕಾರಕ್ಕೆ ತಂದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಪದಚ್ಯುತಿಗೊಳಿಸಿದರೆ ವೀರಶೈವ ಲಿಂಗಾಯತ ಸಮಾಜ ದಂಗೆ ಏಳುತ್ತದೆ’ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯ ಘಟಕದ ಅಧ್ಯಕ್ಷ ಎನ್‌.ತಿಪ್ಪಣ್ಣ ಎಚ್ಚರಿಕೆ ನೀಡಿದರು.

‘ಯಡಿಯೂರಪ್ಪ ಅವರನ್ನು ಯಾವ ಕಾರಣಕ್ಕೆ ತೆಗೆಯುತ್ತೀರಿ? ಅವರೇನು ತಪ್ಪು ಮಾಡಿದ್ದಾರೆ? ವಯಸ್ಸಿನ ಕಾರಣಕ್ಕೆ ತೆಗೆಯುವುದಾದರೆ, ಅವರನ್ನು ಮುಖ್ಯಮಂತ್ರಿ ಮಾಡುವಾಗ ಗೊತ್ತಿರಲಿಲ್ಲವೇ? ನಮ್ಮ ಸಮಾಜದ ಪ್ರಶ್ನಾತೀತ ನಾಯಕನನ್ನು ಗೌರವದಿಂದ ನಡೆಸಿಕೊಳ್ಳಬೇಕು’ ಎಂದು ಪತ್ರಿಕಾಗೋಷ್ಠಿಯಲ್ಲಿ ಅವರು ತಾಕೀತು ಮಾಡಿದರು.

‘ಎಲ್ಲ ಜಾತಿ, ಸಮಾಜದ ಜನರನ್ನು ಯಡಿಯೂರಪ್ಪ ಒಟ್ಟುಗೂಡಿಸಿದ್ದಾರೆ. ಎಲ್ಲ ಸಮಾಜದ ಬೆಂಬಲವೂ ಅವರಿಗಿದೆ. ಅವರಿಲ್ಲದಿದ್ದರೆ ಬಿಜೆಪಿ ಇರುತಿತ್ತಾ ಎಂಬುದನ್ನು ಪಕ್ಷದ ನಾಯಕರು ಅರ್ಥ ಮಾಡಿಕೊಳ್ಳಬೇಕು’ ಎಂದು ಹೇಳಿದರು.

‘ಕಾಂಗ್ರೆಸ್‌ನಲ್ಲಿರುವ ಶಾಮನೂರು ಶಿವಶಂಕರಪ್ಪ, ಎಂ.ಬಿ. ಪಾಟೀಲ ಅವರು ಯಡಿಯೂರಪ್ಪನವರ ರಾಜೀನಾಮೆ ಪಡೆಯಬಾರದು ಎಂದು ಆಗ್ರಹಿಸಿದ್ದಾರೆ. ಇದು ಯಡಿಯೂರಪ್ಪನವರ ಜನಪ್ರಿಯತೆಗೆ ಸಾಕ್ಷಿ’ ಎಂದು ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT