ವರ್ತುಲ ರಸ್ತೆಯ ಈ ಭಾಗದಲ್ಲಿ ಸಂಚಾರ ನಿರ್ಬಂಧಿಸಿರುವ ಕಾರಣ ಭಾರಿ ವಾಹನಗಳು ನಗರದ ಮಧ್ಯದಿಂದ ಸಂಚರಿಸುತ್ತಿವೆ. ಉಕ್ಕಿನ ಕೈಗಾರಿಕೆಗಳು, ಬಾಳೆ, ಭತ್ತ ಹಾಗೂ ಕಬ್ಬಿನ ಗದ್ದೆಗಳಿಂದ ಕೃಷಿ ಉತ್ಪನ್ನಗಳನ್ನು ಇದೇ ಮಾರ್ಗದಲ್ಲಿ ಸಾಗಿಸಲಾಗುತ್ತಿತ್ತು. ಈ ವಾಹನಗಳು ಈಗ ಬಳಸಿ ಹೋಗುವಂತಾಗಿದೆ. ಸಂಚಾರ ನಿರ್ಬಂಧಿಸಿದ್ದನ್ನು ವಿರೋಧಿಸಿ ಇತ್ತೀಚೆಗೆ ರೈತರು ಪೊಲೀಸರೊಂದಿಗೆ ಜಟಾಪಟಿಗೂ ಇಳಿದಿದ್ದರು.