<p><strong>ಬೆಂಗಳೂರು: </strong>ರಾಜ್ಯದಲ್ಲಿ ವೆಂಟಿಲೇಟರ್ಗಳ ಕೊರತೆ ಉಂಟಾಗಿದೆ. ಕೇಂದ್ರ ಸರ್ಕಾರದಿಂದ ವೆಂಟಿಲೇಟರ್ಗಳು ಪೂರೈಕೆಯಾಗಿದ್ದರೂ ಸಕಾಲಕ್ಕೆ ಇವುಗಳನ್ನು ಪೂರೈಸಲಾಗುತ್ತಿಲ್ಲ ಎಂಬ ಆರೋಪಗಳೂ ಕೇಳಿ ಬಂದಿವೆ.</p>.<p>ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಾಜ್ಯ ವೈದ್ಯಕೀಯ ಪೂರೈಕೆಗಳ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಕೆ.ಎಸ್. ಲತಾಕುಮಾರಿ, ‘ಕೇಂದ್ರ ಸರ್ಕಾರದಿಂದ ವೆಂಟಿಲೇಟರ್ ಪೂರೈಸಲಾಗಿದ್ದರೂ ಅವುಗಳನ್ನು ಸರಿಯಾಗಿ ವಿತರಿಸಿಲ್ಲ ಎಂಬ ಆರೋಪ ಸುಳ್ಳು. ಕೇಂದ್ರದಿಂದ ಉಪಕರಣಗಳು ಬರುತ್ತಿದ್ದಂತೆ ಅಗತ್ಯ ಇರುವೆಡೆ ಕಳುಹಿಸಲಾಗುತ್ತಿದೆ’ ಎಂದು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಮೊದಲು ನಮ್ಮ ಬಳಿ 96 ವೆಂಟಿಲೇಟರ್ಗಳು ಇದ್ದವು. 26ರಿಂದ 30 ದಿನಗಳ ಅವಧಿಯಲ್ಲಿ ದಿನಕ್ಕೆ 20–30ರಂತೆ 788 ವೆಂಟಿಲೇಟರ್ಗಳು ಕೇಂದ್ರ ಸರ್ಕಾರದಿಂದ ಪೂರೈಕೆಯಾಗಿವೆ. ಅವು ಬಂದಂತೆ ರಾಜ್ಯದ ವಿವಿಧೆಡೆ ಕಳುಹಿಸಲಾಗಿದೆ. ಈವರೆಗೆ 145 ವೆಂಟಲೇಟರ್ಗಳು ರಾಜ್ಯದ ವಿವಿಧ ಜಿಲ್ಲೆಗಳಿಗೆ ಕಳುಹಿಸಲಾಗಿದ್ದು, ಹಂತ–ಹಂತವಾಗಿ ವಿತರಣೆ ಮಾಡುತ್ತಿದ್ದೇವೆ’ ಎಂದು ಹೇಳಿದರು.</p>.<p>‘ಸರ್ಕಾರಿ ಕೋಟಾದ ಅಡಿ ದಾಖಲಾಗುತ್ತಿರುವ ರೋಗಿಗಳಿಗೆ ಮೀಸಲಾಗಿರುವ ಹಾಸಿಗೆಗಳಿಗೆ ಮೊದಲು ಇವುಗಳನ್ನು ಪೂರೈಸಲು ಆದ್ಯತೆ ನೀಡಲಾಗುತ್ತಿದೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜ್ಯದಲ್ಲಿ ವೆಂಟಿಲೇಟರ್ಗಳ ಕೊರತೆ ಉಂಟಾಗಿದೆ. ಕೇಂದ್ರ ಸರ್ಕಾರದಿಂದ ವೆಂಟಿಲೇಟರ್ಗಳು ಪೂರೈಕೆಯಾಗಿದ್ದರೂ ಸಕಾಲಕ್ಕೆ ಇವುಗಳನ್ನು ಪೂರೈಸಲಾಗುತ್ತಿಲ್ಲ ಎಂಬ ಆರೋಪಗಳೂ ಕೇಳಿ ಬಂದಿವೆ.</p>.<p>ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಾಜ್ಯ ವೈದ್ಯಕೀಯ ಪೂರೈಕೆಗಳ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಕೆ.ಎಸ್. ಲತಾಕುಮಾರಿ, ‘ಕೇಂದ್ರ ಸರ್ಕಾರದಿಂದ ವೆಂಟಿಲೇಟರ್ ಪೂರೈಸಲಾಗಿದ್ದರೂ ಅವುಗಳನ್ನು ಸರಿಯಾಗಿ ವಿತರಿಸಿಲ್ಲ ಎಂಬ ಆರೋಪ ಸುಳ್ಳು. ಕೇಂದ್ರದಿಂದ ಉಪಕರಣಗಳು ಬರುತ್ತಿದ್ದಂತೆ ಅಗತ್ಯ ಇರುವೆಡೆ ಕಳುಹಿಸಲಾಗುತ್ತಿದೆ’ ಎಂದು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಮೊದಲು ನಮ್ಮ ಬಳಿ 96 ವೆಂಟಿಲೇಟರ್ಗಳು ಇದ್ದವು. 26ರಿಂದ 30 ದಿನಗಳ ಅವಧಿಯಲ್ಲಿ ದಿನಕ್ಕೆ 20–30ರಂತೆ 788 ವೆಂಟಿಲೇಟರ್ಗಳು ಕೇಂದ್ರ ಸರ್ಕಾರದಿಂದ ಪೂರೈಕೆಯಾಗಿವೆ. ಅವು ಬಂದಂತೆ ರಾಜ್ಯದ ವಿವಿಧೆಡೆ ಕಳುಹಿಸಲಾಗಿದೆ. ಈವರೆಗೆ 145 ವೆಂಟಲೇಟರ್ಗಳು ರಾಜ್ಯದ ವಿವಿಧ ಜಿಲ್ಲೆಗಳಿಗೆ ಕಳುಹಿಸಲಾಗಿದ್ದು, ಹಂತ–ಹಂತವಾಗಿ ವಿತರಣೆ ಮಾಡುತ್ತಿದ್ದೇವೆ’ ಎಂದು ಹೇಳಿದರು.</p>.<p>‘ಸರ್ಕಾರಿ ಕೋಟಾದ ಅಡಿ ದಾಖಲಾಗುತ್ತಿರುವ ರೋಗಿಗಳಿಗೆ ಮೀಸಲಾಗಿರುವ ಹಾಸಿಗೆಗಳಿಗೆ ಮೊದಲು ಇವುಗಳನ್ನು ಪೂರೈಸಲು ಆದ್ಯತೆ ನೀಡಲಾಗುತ್ತಿದೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>