ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತಿ ಶೀಘ್ರವೇ ಸಂಪುಟ ವಿಸ್ತರಣೆ: ಆರ್‌.ಶಂಕರ್‌

Last Updated 5 ಜನವರಿ 2021, 17:54 IST
ಅಕ್ಷರ ಗಾತ್ರ

ಬೆಂಗಳೂರು: ‘ಇನ್ನು ಎರಡು ಮೂರು ದಿನಗಳಲ್ಲಿ ಮಂತ್ರಿ ಆಗುತ್ತೀಯ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದು, ಶೀಘ್ರವೇ ಸಂಪುಟ ವಿಸ್ತರಣೆ ಆಗುವುದು ಖಚಿತ’ ಎಂದು ವಿಧಾನಪರಿಷತ್‌ ಸದಸ್ಯ ಆರ್‌.ಶಂಕರ್‌ ಹೇಳಿದರು.

ಮಂಗಳವಾರ ಮುಖ್ಯಮಂತ್ರಿಯವರ ಭೇಟಿಯ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿ, ಯಾವುದೇ ಕ್ಷಣದಲ್ಲೂ ಸಂಪುಟ ವಿಸ್ತರಣೆ ಆಗಬಹುದು ಎಂಬ ವಿಶ್ವಾಸ ವ್ಯಕ್ತಪಡಿಸಿದರು.

‘ಯಡಿಯೂರಪ್ಪನವರ ಜತೆ ಉಪಹಾರ ಸೇವಿಸುವ ಸಂದರ್ಭದಲ್ಲಿ ಅವರು ಈ ವಿಚಾರ ತಿಳಿಸಿದರು. ಶಾಸಕ ಉಮೇಶ ಕತ್ತಿಯವರೂ ಇದ್ದರು’ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT