ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೇ 25ರ ದರದಲ್ಲಿ ಹೆಣ್ಣು ಕರುಗಳ ವಿತರಣೆ: ಪ್ರಭು ಚವ್ಹಾಣ್‌

Last Updated 4 ಜುಲೈ 2021, 5:29 IST
ಅಕ್ಷರ ಗಾತ್ರ

ಬೆಂಗಳೂರು: ಪಶು ಸಂಗೋಪನಾ ಇಲಾಖೆಯ ತಳಿ ಸಂವರ್ಧನಾ ಕೇಂದ್ರಗಳಲ್ಲಿ ಜನಿಸುವ ದೇಶೀಯ ತಳಿಗಳ ಹೆಣ್ಣು ಕರುಗಳನ್ನು ‘ಅಮೃತ ಸಿರಿ’ ಯೋಜನೆಯಡಿ ಮಾರುಕಟ್ಟೆ ದರದ ಶೇಕಡ 25ರಷ್ಟು ದರದಲ್ಲಿ ವಿವಿಧ ವರ್ಗದ ಜನರಿಗೆ ವಿತರಣೆ ಮಾಡಲಾಗುವುದು ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್‌ ತಿಳಿಸಿದ್ದಾರೆ.

‘ರಾಜ್ಯದಲ್ಲಿರುವ 19 ತಳಿ ಸಂವರ್ಧನಾ ಕೇಂದ್ರಗಳಲ್ಲಿರುವ 927ಕ್ಕೂ ಹೆಚ್ಚು ಹೆಣ್ಣು ಕರುಗಳನ್ನು ಅಮೃತ ಸಿರಿ ಯೋಜನೆಯಡಿ ವಿತರಿಸಲಾಗುವುದು. ಹಳ್ಳಿಕಾರ್‌, ಅಮೃತ್‌ ಮಹಲ್‌, ಮಲೆನಾಡು ಗಿಡ್ಡ, ಖಿಲಾರಿ ಮತ್ತು ಕೃಷ್ಣವ್ಯಾಲಿ ತಳಿಯ ಈ ಕರುಗಳನ್ನು ದೇಶೀಯ ತಳಿಯ ಜಾನುವಾರುಗಳ ಅಭಿವೃದ್ಧಿ ಉದ್ದೇಶದಿಂದ ವಿತರಣೆ ಮಾಡಲು ನಿರ್ಧರಿಸಲಾಗಿದೆ’ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಈ ಯೋಜನೆಯಡಿ ಕರುಗಳ ಹಂಚಿಕೆಗೆ ಫಲಾನುಭವಿಗಳನ್ನು ಆಯ್ಕೆ ಮಾಡುವಾಗ ಹುತಾತ್ಮ ಯೋಧರ ಪತ್ನಿಯರು, ಶವಸಂಸ್ಕಾರ ನಡೆಸುವ ಕಾರ್ಮಿಕರು, ವಿಧವೆಯರಿಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT