ಭಾರತಕ್ಕೆ 8 ಚೀತಾಗಳನ್ನು ತಂದ ಬಗ್ಗೆ ಖುಷಿ ಹಂಚಿಕೊಂಡ ಡಾ.ಸನತ್ಕೃಷ್ಣ ಮುಳಿಯ ಅವರ ಸಂಬಂಧಿ, ಗುತ್ತಿಗಾರು ಗ್ರಾಮದ ಕೇಶವ ಭಟ್ ಮುಳಿಯ, ‘ಇದು ದೇಶಕ್ಕೆ ಹೆಮ್ಮಯ ಕ್ಷಣ. ಅಂತೆಯೇ ಈ ಚೀತಾಗಳನ್ನು ಕರೆತಂದ ತಂಡದಲ್ಲಿದ್ದ ಪಶುವೈದ್ಯರು ನಮ್ಮ ರಾಜ್ಯದವರು ಎಂಬುದು ಕೂಡಾ ಹೆಮ್ಮೆ ಪಡುವ ವಿಷಯ. ಬಾಲ್ಯದಿಂದಲೂ ಸನತ್ಕೃಷ್ಣಗೆ ವನ್ಯಜೀವಿಗಳು ಹಾಗೂ ಪ್ರಾಣಿಗಳು ಎಂದರೆ ಪಂಚಪ್ರಾಣ. ಹಾಗಾಗಿಯೇ, ತಂದೆಯವರು ಚಿನ್ನಾಭರಣಗಳ ವ್ಯಾಪಾರಿಯಾದರೂ ಸನತ್ಕೃಷ್ಣ ವಿಭಿನ್ನ ವೃತ್ತಿಯನ್ನು ಆರಿಸಿಕೊಂಡಿದ್ದರು’ ಎಂದರು.