<p><strong>ಬೆಂಗಳೂರು:</strong> ರಾಜ್ಯಸಭೆಯಲ್ಲಿ ಇತ್ತೀಚಿನ ದಿನಗಳಲ್ಲಿ ಜನರಿಗೆ ಸ್ಪಂದಿಸುವ ವಿಷಯಗಳು ಚರ್ಚೆ ನಡೆಯದೇ ಇರುವ ಬಗ್ಗೆ ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಅವರು ಬೇಸರ ವ್ಯಕ್ತಪಡಿಸಿದರು.</p>.<p>ವಿಧಾನಸೌಧದ ಬ್ಯಾಂಕ್ವೆಟ್ಹಾಲ್ನಲ್ಲಿ ಎಫ್ಕೆಸಿಸಿಐ ಬುಧವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಎಂ.ಎಸ್.ರಾಮಯ್ಯ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ.ಎಂ.ಆರ್.ಜಯರಾಂ ಅವರಿಗೆ ‘ಸರ್ ಎಂ.ವಿಶ್ವೇಶ್ವರಯ್ಯ ಪ್ರಶಸ್ತಿ’ ಪ್ರದಾನ ಮಾಡಿ ಅವರು ಮಾತನಾಡಿದರು.</p>.<p>‘ರಾಜ್ಯಸಭೆ ಜನರ ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಕೊಳ್ಳುವ ವೇದಿಕೆ ಆಗಬೇಕು. ಆದರೆ ಚರ್ಚೆಗಳು ಆ ದಿಕ್ಕಿನಲ್ಲಿ ಸಾಗುತ್ತಿಲ್ಲ. ಹಲವು ರಾಜ್ಯಗಳ ವಿಧಾನಮಂಡಲಗಳಲ್ಲೂ ಇದೇ ಸ್ಥಿತಿ ಇದೆ. ಪ್ರತಿ ದಿನ ಗದ್ದಲ, ಅಡ್ಡಿ ಉಂಟು ಮಾಡುವ ಘಟನೆಗಳಿಂದ ಕಲಾಪದ ದಾರಿ ತಪ್ಪಿ ಹೋಗುತ್ತಿದೆ. ಇದರಿಂದ ಮನಸ್ಸಿಗೆ ಬೇಸರವಾಗುತ್ತದೆ’ ಎಂದು ವೆಂಕಯ್ಯನಾಯ್ಡು ಹೇಳಿದರು.</p>.<p>ಕರ್ನಾಟಕ ಹಲವು ಮುತ್ಸದ್ಧಿ ರಾಜಕಾರಣಿಗಳನ್ನು ಕಂಡಿದೆ. ಕೆಂಗಲ್ ಹನುಮಂತಯ್ಯ, ನಿಜಲಿಂಗಪ್ಪ, ದೇವರಾಜ ಅರಸು, ರಾಮಕೃಷ್ಣ ಹೆಗಡೆ ಅವರು ಮೌಲ್ಯಯುತ ರಾಜಕಾರಣಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದೂ ಅವರು ಸ್ಮರಿಸಿದರು.</p>.<p>ಕನ್ನಡದಲ್ಲಿಯೇ ತಮ್ಮ ಭಾಷಣ ಆರಂಭಿಸಿದ ವೆಂಕಯ್ಯನಾಯ್ಡು, ದೇಶಕಂಡ ಬಹುಮುಖ ಪ್ರತಿಭೆ, ಅಪರೂಪದ ಮೇಧಾವಿ ಸರ್.ಎಂ.ವಿಶ್ವೇಶ್ವರಯ್ಯ. ದೇಶದಲ್ಲಿ ಹಲವು ಅಣೆಕಟ್ಟುಗಳನ್ನು<br />ನಿರ್ಮಿಸಿ, ಜಲಸಂಪನ್ಮೂಲದ ಸದ್ಬಳಕೆಯ ಹಾದಿ ತೋರಿದರು. ತಿರುಮಲ ಬೆಟ್ಟದ ಘಾಟ್ ರಸ್ತೆ ನಿರ್ಮಾಣಕ್ಕೂ ಮಾರ್ಗದರ್ಶನ ನೀಡಿದ್ದರು ಎಂದು ವೆಂಕಯ್ಯನಾಯ್ಡು ಹೇಳಿದರು.</p>.<p>ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ವಿಶ್ವೇಶ್ವರಯ್ಯ ಅವರ ದೂರದೃಷ್ಟಿಯ ಫಲವಾಗಿ ರಾಜ್ಯದಲ್ಲಿ ಕಬ್ಬಿಣ ಮತ್ತು ಉಕ್ಕು, ಸಿಮೆಂಟ್, ಸಾಬೂನು, ಕಾಗದ ಕಾರ್ಖಾನೆ ಹೀಗೆ ಹಲವು ವಲಯಗಳ ಕೈಗಾರಿಕೆಗಳು ಪ್ರಾರಂಭವಾದವು. ಅವರೊಬ್ಬ ಯುಗಪುರುಷ ಎಂದು ಬಣ್ಣಿಸಿದರು.</p>.<p>ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್, ಎಫ್ಕೆಸಿಸಿಐ ಅಧ್ಯಕ್ಷ ಪೆರಿಕಲ್ ಸುಂದರ್, ಸಂಸದ ಪಿ.ಸಿ.ಮೋಹನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯಸಭೆಯಲ್ಲಿ ಇತ್ತೀಚಿನ ದಿನಗಳಲ್ಲಿ ಜನರಿಗೆ ಸ್ಪಂದಿಸುವ ವಿಷಯಗಳು ಚರ್ಚೆ ನಡೆಯದೇ ಇರುವ ಬಗ್ಗೆ ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಅವರು ಬೇಸರ ವ್ಯಕ್ತಪಡಿಸಿದರು.</p>.<p>ವಿಧಾನಸೌಧದ ಬ್ಯಾಂಕ್ವೆಟ್ಹಾಲ್ನಲ್ಲಿ ಎಫ್ಕೆಸಿಸಿಐ ಬುಧವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಎಂ.ಎಸ್.ರಾಮಯ್ಯ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ.ಎಂ.ಆರ್.ಜಯರಾಂ ಅವರಿಗೆ ‘ಸರ್ ಎಂ.ವಿಶ್ವೇಶ್ವರಯ್ಯ ಪ್ರಶಸ್ತಿ’ ಪ್ರದಾನ ಮಾಡಿ ಅವರು ಮಾತನಾಡಿದರು.</p>.<p>‘ರಾಜ್ಯಸಭೆ ಜನರ ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಕೊಳ್ಳುವ ವೇದಿಕೆ ಆಗಬೇಕು. ಆದರೆ ಚರ್ಚೆಗಳು ಆ ದಿಕ್ಕಿನಲ್ಲಿ ಸಾಗುತ್ತಿಲ್ಲ. ಹಲವು ರಾಜ್ಯಗಳ ವಿಧಾನಮಂಡಲಗಳಲ್ಲೂ ಇದೇ ಸ್ಥಿತಿ ಇದೆ. ಪ್ರತಿ ದಿನ ಗದ್ದಲ, ಅಡ್ಡಿ ಉಂಟು ಮಾಡುವ ಘಟನೆಗಳಿಂದ ಕಲಾಪದ ದಾರಿ ತಪ್ಪಿ ಹೋಗುತ್ತಿದೆ. ಇದರಿಂದ ಮನಸ್ಸಿಗೆ ಬೇಸರವಾಗುತ್ತದೆ’ ಎಂದು ವೆಂಕಯ್ಯನಾಯ್ಡು ಹೇಳಿದರು.</p>.<p>ಕರ್ನಾಟಕ ಹಲವು ಮುತ್ಸದ್ಧಿ ರಾಜಕಾರಣಿಗಳನ್ನು ಕಂಡಿದೆ. ಕೆಂಗಲ್ ಹನುಮಂತಯ್ಯ, ನಿಜಲಿಂಗಪ್ಪ, ದೇವರಾಜ ಅರಸು, ರಾಮಕೃಷ್ಣ ಹೆಗಡೆ ಅವರು ಮೌಲ್ಯಯುತ ರಾಜಕಾರಣಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದೂ ಅವರು ಸ್ಮರಿಸಿದರು.</p>.<p>ಕನ್ನಡದಲ್ಲಿಯೇ ತಮ್ಮ ಭಾಷಣ ಆರಂಭಿಸಿದ ವೆಂಕಯ್ಯನಾಯ್ಡು, ದೇಶಕಂಡ ಬಹುಮುಖ ಪ್ರತಿಭೆ, ಅಪರೂಪದ ಮೇಧಾವಿ ಸರ್.ಎಂ.ವಿಶ್ವೇಶ್ವರಯ್ಯ. ದೇಶದಲ್ಲಿ ಹಲವು ಅಣೆಕಟ್ಟುಗಳನ್ನು<br />ನಿರ್ಮಿಸಿ, ಜಲಸಂಪನ್ಮೂಲದ ಸದ್ಬಳಕೆಯ ಹಾದಿ ತೋರಿದರು. ತಿರುಮಲ ಬೆಟ್ಟದ ಘಾಟ್ ರಸ್ತೆ ನಿರ್ಮಾಣಕ್ಕೂ ಮಾರ್ಗದರ್ಶನ ನೀಡಿದ್ದರು ಎಂದು ವೆಂಕಯ್ಯನಾಯ್ಡು ಹೇಳಿದರು.</p>.<p>ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ವಿಶ್ವೇಶ್ವರಯ್ಯ ಅವರ ದೂರದೃಷ್ಟಿಯ ಫಲವಾಗಿ ರಾಜ್ಯದಲ್ಲಿ ಕಬ್ಬಿಣ ಮತ್ತು ಉಕ್ಕು, ಸಿಮೆಂಟ್, ಸಾಬೂನು, ಕಾಗದ ಕಾರ್ಖಾನೆ ಹೀಗೆ ಹಲವು ವಲಯಗಳ ಕೈಗಾರಿಕೆಗಳು ಪ್ರಾರಂಭವಾದವು. ಅವರೊಬ್ಬ ಯುಗಪುರುಷ ಎಂದು ಬಣ್ಣಿಸಿದರು.</p>.<p>ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್, ಎಫ್ಕೆಸಿಸಿಐ ಅಧ್ಯಕ್ಷ ಪೆರಿಕಲ್ ಸುಂದರ್, ಸಂಸದ ಪಿ.ಸಿ.ಮೋಹನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>