ಆದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೆಹಲಿಗೆ ಭೇಟಿ ನೀಡಿ ಬಂದ ಮರುದಿನವೇ ಜಗದೀಶ ಶೆಟ್ಟರ್ ಅವರು ದೆಹಲಿಗೆ ತೆರಳಿರುವುದಕ್ಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಪ್ರದೀಪ ಶೆಟ್ಟರ್ ಪ್ರತಿನಿಧಿಸುತ್ತಿರುವ ಧಾರವಾಡ, ಹಾವೇರಿ, ಗದಗ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ಗೆ ನಡೆಯುತ್ತಿರುವ ಚುನಾವಣೆಯಲ್ಲಿ ಮರು ಆಯ್ಕೆ ಬಯಸಿದ್ದಾರೆ.
ಟಿಕೆಟ್ ಖಚಿತ ಪಡಿಸಿಕೊಳ್ಳುವ ದೃಷ್ಟಿಯಿಂದಲೂ ದೆಹಲಿಗೆ ಭೇಟಿ ನೀಡಿರಬಹುದು ಎಂದು ಅವರ ಆಪ್ತ ವಲಯ ಹೇಳಿದೆ.