ಆಗ್ನೇಯ ಪದವೀಧರರ ಕ್ಷೇತ್ರದಲ್ಲಿ ಬಿಜೆಪಿಯಿಂದ ಚಿದಾನಂದ ಎಂ., ಜೆಡಿಎಸ್ನಿಂದ ಪರಿಷತ್ತಿನ ಮಾಜಿ ಸದಸ್ಯ ಆರ್. ಚೌಡರೆಡ್ಡಿ ತೂಪಲ್ಲಿ, ಕಾಂಗ್ರೆಸ್ನಿಂದ ಪರಿಷತ್ತಿನ ಮಾಜಿ ಸದಸ್ಯ ರಮೇಶ್ ಬಾಬು ಸೇರಿದಂತೆ 15 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. 18 ಮಂದಿ ನಾಮಪತ್ರ ಸಲ್ಲಿಸಿದ್ದು, ಮೂವರು ವಾಪಸ್ ಪಡೆದಿದ್ದಾರೆ. ಶಾಸಕಿಯ ಪತಿ ಶ್ರೀನಿವಾಸ್ ಮತ್ತು ತುಮಕೂರಿನ ಬಿಜೆಪಿ ಮುಖಂಡ ಎಚ್.ಎಸ್. ಲೇಪಾಕ್ಷ್ ಅವರು ಬಂಡಾಯ ಅಭ್ಯರ್ಥಿಗಳಾಗಿ ಚುನಾವಣಾ ಕಣದಲ್ಲಿ ಉಳಿದಿದ್ದಾರೆ.