ಪ್ರತಾಪಚಂದ್ರ ಶೆಟ್ಟಿ ವಿರುದ್ಧ ಅವಿಶ್ವಾಸ ನಿರ್ಣಯ ಅಂಗೀಕರಿಸಿ, ಅವರನ್ನು ಸಭಾಪತಿ ಸ್ಥಾನದಿಂದ ಕೆಳಕ್ಕಿಳಿಸಲು ಬಿಜೆಪಿ ಮತ್ತು ಜೆಡಿಎಸ್ ಒಂದಾಗಿವೆ. ವಿಧಾನ ಮಂಡಲದ ಕಳೆದ ಅಧಿವೇಶನ ಮತ್ತು ಡಿಸೆಂಬರ್ 15ರಂದು ನಡೆದ ವಿಧಾನ ಪರಿಷತ್ ಅಧಿವೇಶನದಲ್ಲಿ ನಿರ್ಣಯ ಮಂಡನೆಗೆ ಉಭಯ ಪಕ್ಷಗಳು ಯತ್ನಿಸಿದ್ದವು. ಈ ಎಲ್ಲ ಬೆಳವಣಿಗೆಗಳಿಂದ ಬಹುತೇಕ ಪರಿಷತ್ ಸಭಾಪತಿ ಸ್ಥಾನದಿಂದ ಕೆಳಗಿಳಿಯುವ ನಿರ್ಧಾರಕ್ಕೆ ಬಂದಿರುವ ಅವರು, ಈ ಕಾರಣಕ್ಕಾಗಿಯೇ ಕಾರು ಮತ್ತು ಬಂಗಲೆ ಹಿಂದಿರುಗಿಸಿದ್ದಾರೆ ಎನ್ನಲಾಗಿದೆ.