ಪಟ್ಟಣದ ರವದಿ ಫಾರ್ಮ್ಹೌಸ್ ನಲ್ಲಿ ಬುಧವಾರ ನಡೆದ ‘ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳ’ ಸಭೆಯಲ್ಲಿ ಅವರು ಮಾತನಾಡಿ, ‘ಕಳೆದ ಬಾರಿ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡ ವೀರಕುಮಾರ ಪಾಟೀಲ ಅವರ ಅಲ್ಪ ಅಂತರದ ಸೋಲಿಗೆ ನಮ್ಮವರೇ ಕಾರಣರಾದರು. ನಮ್ಮ ಅಭ್ಯರ್ಥಿ ಸೋಲಿಸಿದವರು ಈಗ ಕಾಂಗ್ರೆಸ್ ಪಕ್ಷದಲ್ಲಿ ಇಲ್ಲ. ಅವರು ಬಿಜೆಪಿಗೆ ಹೋಗಿದ್ದಾರೆ’ ಎಂದು ಯಾರ ಹೆಸರನ್ನೂ ಪ್ರಸ್ತಾಪಿಸದೇ ಮಾರ್ಮಿಕವಾಗಿ ಹೇಳಿದರು.