ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನಸೌಧ ಎದುರೇ ರಸ್ತೆ ಕುಸಿತ: ಆತಂಕ

Last Updated 16 ಸೆಪ್ಟೆಂಬರ್ 2021, 20:04 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನಸೌಧ ಕೆಂಗಲ್ ಗೇಟ್‌ ಎದುರಿನ ರಸ್ತೆಯಲ್ಲಿ ಡಾಂಬರು ಕುಸಿದು ದೊಡ್ಡ ರಂಧ್ರ ಬಿದ್ದಿದ್ದರಿಂದ ಸ್ಥಳದಲ್ಲಿ ಕೆಲ ಹೊತ್ತು ಆತಂಕ ಸೃಷ್ಟಿಯಾಗಿತ್ತು.

ಅಧಿವೇಶನ ನಡೆಯುತ್ತಿದ್ದರಿಂದ ವಿಧಾನಸೌಧ ಸುತ್ತಮುತ್ತ ಬಿಗಿ ಭದ್ರತೆ ಇದೆ. ಇದರ ನಡುವೆಯೇ ಸಾಕಷ್ಟು ಮಂದಿ, ವಿಧಾನಸೌಧ ಅಕ್ಕ–ಪಕ್ಕದಲ್ಲಿ ಓಡಾಡುತ್ತಿದ್ದಾರೆ. ಕೆಂಗಲ್ ಗೇಟ್‌ ಎದುರೇ ಗುರುವಾರ ಸಂಜೆ ಡಾಂಬರು ಕಿತ್ತು ರಸ್ತೆ ಕುಸಿದಿತ್ತು. ರಸ್ತೆಯ ಕೆಳಭಾಗದಲ್ಲಿ ಗುಹೆ ಆಕಾರದ ಜಾಗ ಕಂಡಿತ್ತು. ಕುಸಿದ ಸ್ಥಳವನ್ನು ಗಮನಿಸಿದ ಪೊಲೀಸರು, ಸುತ್ತಮುತ್ತ ಬ್ಯಾರಿಕೇಡ್ ನಿಲ್ಲಿಸಿದರು. ಸ್ಥಳದ ಬಳಿ ಯಾರೂ ಸಂಚರಿಸದಂತೆ ತಡೆದರು.

‘ರಸ್ತೆಯಲ್ಲಿ ಗುರುವಾರ ಬೆಳಿಗ್ಗೆಯಿಂದ ವಾಹನಗಳ ಓಡಾಟ ಹೆಚ್ಚಿತ್ತು. ಸಂಜೆ ರಸ್ತೆ ಕುಸಿದಿದ್ದರಿಂದ ಆತಂಕ ಉಂಟಾಗಿತ್ತು. ಅದೃಷ್ಟವಶಾತ್ ಯಾವುದೇ ಹಾನಿ ಉಂಟಾಗಿಲ್ಲ. ರಸ್ತೆ ಕುಸಿತಕ್ಕೆ ಕಾರಣವೇನು ಎಂಬುದು ಗೊತ್ತಾಗಿಲ್ಲ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

‘ಕಳಪೆ ಕಾಮಗಾರಿ ಕಾರಣವಿರಬಹುದು. ಈ ಬಗ್ಗೆ ಸಂಬಂಧಪಟ್ಟ ಎಂಜಿನಿಯರ್ ಅವರಿಗೆ ಮಾಹಿತಿ ನೀಡಲಾಗಿದೆ’ ಎಂದೂ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT