‘ಪ್ಯಾಲೇಸ್ ಗುಟ್ಟಹಳ್ಳಿಯ ನಿವಾಸಿಯಾಗಿರುವ ನಂದಕುಮಾರ್,ಮುಖ್ಯಮಂತ್ರಿ ಪರಿಹಾರ ನಿಧಿ ಬಗ್ಗೆ ಮಾಹಿತಿ ಪಡೆಯಲು ವಿಧಾನಸೌಧಕ್ಕೆ ಸಂಜೆ ಭೇಟಿ ನೀಡಿದ್ದರು. ಈ ವೇಳೆ ಅಧಿಕಾರಿಗಳೊಂದಿಗೆ ಗಲಾಟೆ ಮಾಡಿಕೊಂಡಿದ್ದ ಅವರು ಫಿನಾಯಿಲ್ ಸೇವಿಸಿದ್ದರು. ಅಸ್ವಸ್ಥಗೊಂಡಿದ್ದ ಅವರನ್ನು ಕೂಡಲೇ ಚಿಕಿತ್ಸೆಗಾಗಿ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.