ಬೆಂಗಳೂರು: ‘ಪಕ್ಷದ ಜಿಲ್ಲಾ ಘಟಕಗಳ ಅಧ್ಯಕ್ಷರು ಹಾಗೂ ಇತರ ಪದಾಧಿಕಾರಿಗಳ ನೇಮಕ ಸಂಬಂಧ ಅಭಿಪ್ರಾಯ ನೀಡಲು ಒಂದೆರಡು ದಿನಗಳಲ್ಲಿ ವೀಕ್ಷಕರನ್ನು ನೇಮಿಸಲಾಗುವುದು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಈ ಬಗ್ಗೆ ಜಿಲ್ಲಾ ಘಟಕಗಳ ಅಧ್ಯಕ್ಷರಿಗೆ, ಶಾಸಕರಿಗೆ ಸೂಚನೆ ನೀಡಲಾಗಿದೆ. ವೀಕ್ಷಕರು ಎಲ್ಲ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ. ಪದಾಧಿಕಾರಿಗಳಾಗಿ ಹೊಸಬರ ನೇಮಕಕ್ಕೂ ಮೊದಲು ವೀಕ್ಷಕರ ಮೂಲಕ ಅಭಿಪ್ರಾಯ ಸಂಗ್ರಹಿಸಲಾಗುವುದು’ ಎಂದರು.