ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ ಎಪಿಎಂಸಿ ಆಂತರಿಕ ಲೆಕ್ಕ ಪರಿಶೋಧಕ ಲೋಕಾಯುಕ್ತ ಬಲೆಗೆ

Last Updated 2 ಡಿಸೆಂಬರ್ 2022, 5:25 IST
ಅಕ್ಷರ ಗಾತ್ರ

ವಿಜಯಪುರ: ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ವ್ಯಾಪಾರ ಮಾಡಲು ಟ್ರೇಡಿಂಗ್ ಲೈಸೆನ್ಸ್ ನೀಡಲು ಲಂಚ ತೆಗೆದುಕೊಳ್ಳುತ್ತಿದ್ದ ವಿಜಯಪುರ ಎಪಿಎಂಸಿ ಆಂತರಿಕ ಲೆಕ್ಕಪರಿಶೋಧಕ ಶಂಕರಯ್ಯ ಹಿರೇಮಠ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ.

ಟ್ರೇಡಿಂಗ್ ಲೈಸೆನ್ಸ್ ನೀಡಲು ₹ 5 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿ ವ್ಯಾಪಾರಿಯಿಂದ ಲಂಚ‌ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಲಂಚದ ಹಣದ ಸಮೇತ ಎಪಿಎಂಸಿ ಆಂತರಿಕ ಲೆಕ್ಕ ಪರಿಶೋಧಕ ಸಿಕ್ಕಿಬಿದ್ದಿದ್ದಾರೆ.

ಕಚೇರಿಯಲ್ಲಿ ತಪಾಸಣೆ ವೇಳೆ ಆರೋಪಿಯ ಬಳಿ ಹೆಚ್ಚುವರಿಯಾಗಿ ₹ 39 ಸಾವಿರ ಹಣ ಪತ್ತೆಯಾಗಿದೆ ಎಂದು ವಿಜಯಪುರ ಲೋಕಾಯುಕ್ತ‌ ಎಸ್ಪಿ ಅನಿತಾ ಹದ್ದಣ್ಣವರ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT