ಮೈಸೂರಿನ ಉರಿಲಿಂಗ ಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಮಾತನಾಡಿ, ‘ಸಂವಿಧಾನದ ಬಲದಲ್ಲೇ ಭಾರತ ನಿಂತಿದೆ. ಈಗ ಶಿಕ್ಷಣ, ಉದ್ಯೋಗ ಮತ್ತು ಇತರ ಹಕ್ಕುಗಳನ್ನು ದಮನಿಸುವ ಮೂಲಕ ಬಹುಸಂಖ್ಯಾತ ಜನರನ್ನು ಅಂಚಿಗೆ ತಳ್ಳುವ ಪ್ರಯತ್ನ ನಡೆದಿದೆ. ಸಂವಿಧಾನವನ್ನು ಉಳಿಸಿಕೊಂಡರೆ ಮಾತ್ರ ಈ ಜನರ ಹಕ್ಕುಗಳನ್ನು ರಕ್ಷಿಸಲು ಸಾಧ್ಯ. ಅದಕ್ಕಾಗಿ ಪ್ರತಿರೋಧ ರೂಪಿಸಲಾಗುವುದು’ ಎಂದು ಹೇಳಿದರು.