<p><strong>ಬೆಂಗಳೂರು: </strong>‘ಕೋವಿಡ್ ಕಾರಣದಿಂದ ‘ಹಳ್ಳಿಗೆ ನಡೆಯಿರಿ ಜಿಲ್ಲಾಧಿಕಾರಿಗಳೇ’ ಕಾರ್ಯಕ್ರಮ ಸ್ಥಗಿತಗೊಳಿಸಲಾಗಿತ್ತು. ಈಗ ಆ ಕಾರ್ಯಕ್ರಮವನ್ನು ಮತ್ತೆ ಆರಂಭಿಸಲಾಗುತ್ತಿದೆ. ಪ್ರತಿ ತಿಂಗಳ ಮೂರನೆ ಶನಿವಾರ ಎಲ್ಲ ಜಿಲ್ಲಾಧಿಕಾರಿಗಳಿಗೆ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಗ್ರಾಮ ವಾಸ್ತವ್ಯ ಕಡ್ಡಾಯಗೊಳಿಸಲಾಗಿದೆ’ ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದರು.</p>.<p>ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ಇದು ನನ್ನ ಕನಸಿನ ಯೋಜನೆ. ಹಳ್ಳಿ ಜನರ ಸಮಸ್ಯೆ ಆಲಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದರು.</p>.<p>ಫೆ. 3ರಿಂದ ಏರೋ ಇಂಡಿಯಾ: ‘ಫೆ. 3ರಿಂದ 5ರವರೆಗೆ ಮೂರು ದಿನ ಏರೋ ಇಂಡಿಯಾ - 2021 ನಡೆಯಲಿದೆ. 14 ರಾಷ್ಟ್ರಗಳ 551 ಪ್ರದರ್ಶನದ ಕೇಂದ್ರ, 61 ವಿಮಾನಗಳ ಪ್ರದರ್ಶನ ನಡೆಯಲಿದೆ’ ಎಂದು ಅವರು ಹೇಳಿದರು.</p>.<p>‘ಕಳೆದ ಬಾರಿ ಪ್ರದರ್ಶನದ ಬಳಿ ವಾಹನ ಪಾರ್ಕಿಂಗ್ ಪ್ರದೇಶದಲ್ಲಿ ಬೆಂಕಿ ಅನಾಹುತ ಸಂಭವಿಸಿತ್ತು. ಈ ಬಾರಿ, ಆ ಘಟನೆ ಮರುಕಳಿಸದಂತೆ ಮಾರ್ಗಸೂಚಿ ಹೊರಡಿಸಲಾಗಿದೆ. ಎಲ್ಲ ಇಲಾಖೆಗಳ ಸಮನ್ವಯತೆ ಬಳಿಕ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ’ ಎಂದರು.</p>.<p>‘ಜನ ಸಾಮಾನ್ಯರ ರಕ್ಷಣೆ, ಜನರ ಸ್ಥಳಾಂತರ, ಆಸ್ತಿ ಸಂರಕ್ಷಣೆ ಎಲ್ಲವೂ ಇದರಲ್ಲಿ ಈ ಮಾರ್ಗಸೂಚಿಯಲ್ಲಿದೆ. ಒಳಾಂಗಣ ಹಾಗೂ ಹೊರಾಂಗಣ ವಿಪತ್ತು ನಿರ್ವಹಣೆಗೂ ಮಾರ್ಗಸೂಚಿ ಇದೆ’ ಎಂದು ಅವರು ವಿವರಿಸಿದರು.</p>.<p>ಮುಖ್ಯಮಂತ್ರಿ ಎಲ್ಲರಿಗೂ ಉತ್ತಮ ಖಾತೆ ಕೊಟ್ಟಿದ್ದಾರೆ: ಖಾತೆ ಬದಲಾವಣೆಯಿಂದ ಕೆಲವು ಸಚಿವರು ಅಸಮಾಧಾನಗೊಂಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಎಲ್ಲರನ್ನೂ ತೃಪ್ತಿಪಡಿಸಲು ದೇವರಿಂದಲೂ ಸಾಧ್ಯವಿಲ್ಲ. ಮುಖ್ಯಮಂತ್ರಿ ಎಲ್ಲರಿಗೂ ಉತ್ತಮವಾದ ಖಾತೆಗಳನ್ನು ಕೊಟ್ಟಿದ್ದಾರೆ’ ಎಂದರು.</p>.<p>‘ನಾನು ಬೆಳಿಗ್ಗೆ ಗೋಪಾಲಯ್ಯ, ಎಂಟಿಬಿ ನಾಗರಾಜ್ ಜೊತೆ ದೂರವಾಣಿ ಮೂಲಕ ಮಾತನಾಡಿದ್ದೇನೆ. ರಾಜೀನಾಮೆ ಕೊಡುವಷ್ಟರ ರೀತಿಯ ಅಸಮಾಧಾನ ಮಾಧುಸ್ವಾಮಿ ಅವರಿಗೆ ಇಲ್ಲ’ ಎಂದರು.</p>.<p>‘ಮುಖ್ಯಮಂತ್ರಿ ಜೊತೆ ನಾವೆಲ್ಲರೂ ಇದ್ದೇವೆ. ಇಂತಹದ್ದೇ ಖಾತೆ ಬೇಕು ಎಂದು ನಾನು ಕೇಳಿಲ್ಲ. ನಾನು ಈ ಹಿಂದೆ ಗೃಹ ಖಾತೆ ನಿಭಾಯಿಸಿದ್ದೇನೆ. ಖಾತೆ ಬದಲಾವಣೆ ಮುಖ್ಯಮಂತ್ರಿಯ ಪರಮಾಧಿಕಾರ. ಅಸಮಾಧಾನ ಇರುವವರ ಜೊತೆ ಮುಖ್ಯಮಂತ್ರಿ ಕುಳಿತು ಚರ್ಚಿಸಲಿದ್ದಾರೆ’ ಎಂದರು.</p>.<p>‘ಯಡಿಯೂರಪ್ಪ ಇದೇ ಮೊದಲ ಬಾರಿ ಮುಖ್ಯಮಂತ್ರಿ ಆದವರಲ್ಲ. ನಾಲ್ಕು ಬಾರಿ ಮುಖ್ಯಮಂತ್ರಿ ಆಗಿರುವವರು. ಖಾತೆ ಕ್ಯಾತೆ ಸರ್ವೇ ಸಾಮಾನ್ಯ. ಮುಖ್ಯಮಂತ್ರಿ ಅಳೆದು ತೂಗಿ ಖಾತೆ ಹಂಚಿಕೆ ಮಾಡಿದ್ದಾರೆ. ಯಾರಿಗೆ ಯಾವ ಖಾತೆ ಕೊಡಬೇಕೊ ಅದನ್ನು ಕೊಟ್ಟಿದ್ದಾರೆ’ ಎಂದು ಸಮರ್ಥನೆ ನೀಡಿದರು.</p>.<p>ಸಮರ್ಥ ವಿರೋಧ ಪಕ್ಷ ಇಲ್ಲ: ‘ರಾಜ್ಯದಲ್ಲಿ ಸಮರ್ಥವಾದ ವಿರೋಧ ಪಕ್ಷವೇ ಇಲ್ಲ. ಕಾಂಗ್ರೆಸ್ ಅಧಿಕಾರ ನಡೆಸಿದ ಸಂದರ್ಭದಲ್ಲಿ ವೀರಪ್ಪ ಮೊಯಿಲಿಯವರ ಬಟ್ಟೆ ಹರಿದು ಹಾಕಿ ಓಡಿಸಿದ್ದರು. ತಮ್ಮ ತಟ್ಟೆಯಲ್ಲಿ ಹೆಗ್ಗಣವಿದ್ದರೂ ನಮ್ಮ ತಟ್ಟೆಯ ನೊಣ ತೋರಿಸುವ ಯತ್ನವನ್ನು ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ’ ಎಂದು ಲೇವಡಿ ಮಾಡಿದರು.</p>.<p>ರೈತರಪರ ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿಕ್ರಿಯಿಸಿದ ಅವರು, ‘ಇಷ್ಟು ದಿನ ಕಾಂಗ್ರೆಸ್ ನಾಯಕರು ಮಲಗಿದ್ದರು. ಆದರೆ, ಈಗ ಎದ್ದು ಬಂದಿದ್ದಾರೆ’ ಎಂದು ಅಶೋಕ್ ವಾಗ್ದಾಳಿ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಕೋವಿಡ್ ಕಾರಣದಿಂದ ‘ಹಳ್ಳಿಗೆ ನಡೆಯಿರಿ ಜಿಲ್ಲಾಧಿಕಾರಿಗಳೇ’ ಕಾರ್ಯಕ್ರಮ ಸ್ಥಗಿತಗೊಳಿಸಲಾಗಿತ್ತು. ಈಗ ಆ ಕಾರ್ಯಕ್ರಮವನ್ನು ಮತ್ತೆ ಆರಂಭಿಸಲಾಗುತ್ತಿದೆ. ಪ್ರತಿ ತಿಂಗಳ ಮೂರನೆ ಶನಿವಾರ ಎಲ್ಲ ಜಿಲ್ಲಾಧಿಕಾರಿಗಳಿಗೆ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಗ್ರಾಮ ವಾಸ್ತವ್ಯ ಕಡ್ಡಾಯಗೊಳಿಸಲಾಗಿದೆ’ ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದರು.</p>.<p>ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ಇದು ನನ್ನ ಕನಸಿನ ಯೋಜನೆ. ಹಳ್ಳಿ ಜನರ ಸಮಸ್ಯೆ ಆಲಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದರು.</p>.<p>ಫೆ. 3ರಿಂದ ಏರೋ ಇಂಡಿಯಾ: ‘ಫೆ. 3ರಿಂದ 5ರವರೆಗೆ ಮೂರು ದಿನ ಏರೋ ಇಂಡಿಯಾ - 2021 ನಡೆಯಲಿದೆ. 14 ರಾಷ್ಟ್ರಗಳ 551 ಪ್ರದರ್ಶನದ ಕೇಂದ್ರ, 61 ವಿಮಾನಗಳ ಪ್ರದರ್ಶನ ನಡೆಯಲಿದೆ’ ಎಂದು ಅವರು ಹೇಳಿದರು.</p>.<p>‘ಕಳೆದ ಬಾರಿ ಪ್ರದರ್ಶನದ ಬಳಿ ವಾಹನ ಪಾರ್ಕಿಂಗ್ ಪ್ರದೇಶದಲ್ಲಿ ಬೆಂಕಿ ಅನಾಹುತ ಸಂಭವಿಸಿತ್ತು. ಈ ಬಾರಿ, ಆ ಘಟನೆ ಮರುಕಳಿಸದಂತೆ ಮಾರ್ಗಸೂಚಿ ಹೊರಡಿಸಲಾಗಿದೆ. ಎಲ್ಲ ಇಲಾಖೆಗಳ ಸಮನ್ವಯತೆ ಬಳಿಕ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ’ ಎಂದರು.</p>.<p>‘ಜನ ಸಾಮಾನ್ಯರ ರಕ್ಷಣೆ, ಜನರ ಸ್ಥಳಾಂತರ, ಆಸ್ತಿ ಸಂರಕ್ಷಣೆ ಎಲ್ಲವೂ ಇದರಲ್ಲಿ ಈ ಮಾರ್ಗಸೂಚಿಯಲ್ಲಿದೆ. ಒಳಾಂಗಣ ಹಾಗೂ ಹೊರಾಂಗಣ ವಿಪತ್ತು ನಿರ್ವಹಣೆಗೂ ಮಾರ್ಗಸೂಚಿ ಇದೆ’ ಎಂದು ಅವರು ವಿವರಿಸಿದರು.</p>.<p>ಮುಖ್ಯಮಂತ್ರಿ ಎಲ್ಲರಿಗೂ ಉತ್ತಮ ಖಾತೆ ಕೊಟ್ಟಿದ್ದಾರೆ: ಖಾತೆ ಬದಲಾವಣೆಯಿಂದ ಕೆಲವು ಸಚಿವರು ಅಸಮಾಧಾನಗೊಂಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಎಲ್ಲರನ್ನೂ ತೃಪ್ತಿಪಡಿಸಲು ದೇವರಿಂದಲೂ ಸಾಧ್ಯವಿಲ್ಲ. ಮುಖ್ಯಮಂತ್ರಿ ಎಲ್ಲರಿಗೂ ಉತ್ತಮವಾದ ಖಾತೆಗಳನ್ನು ಕೊಟ್ಟಿದ್ದಾರೆ’ ಎಂದರು.</p>.<p>‘ನಾನು ಬೆಳಿಗ್ಗೆ ಗೋಪಾಲಯ್ಯ, ಎಂಟಿಬಿ ನಾಗರಾಜ್ ಜೊತೆ ದೂರವಾಣಿ ಮೂಲಕ ಮಾತನಾಡಿದ್ದೇನೆ. ರಾಜೀನಾಮೆ ಕೊಡುವಷ್ಟರ ರೀತಿಯ ಅಸಮಾಧಾನ ಮಾಧುಸ್ವಾಮಿ ಅವರಿಗೆ ಇಲ್ಲ’ ಎಂದರು.</p>.<p>‘ಮುಖ್ಯಮಂತ್ರಿ ಜೊತೆ ನಾವೆಲ್ಲರೂ ಇದ್ದೇವೆ. ಇಂತಹದ್ದೇ ಖಾತೆ ಬೇಕು ಎಂದು ನಾನು ಕೇಳಿಲ್ಲ. ನಾನು ಈ ಹಿಂದೆ ಗೃಹ ಖಾತೆ ನಿಭಾಯಿಸಿದ್ದೇನೆ. ಖಾತೆ ಬದಲಾವಣೆ ಮುಖ್ಯಮಂತ್ರಿಯ ಪರಮಾಧಿಕಾರ. ಅಸಮಾಧಾನ ಇರುವವರ ಜೊತೆ ಮುಖ್ಯಮಂತ್ರಿ ಕುಳಿತು ಚರ್ಚಿಸಲಿದ್ದಾರೆ’ ಎಂದರು.</p>.<p>‘ಯಡಿಯೂರಪ್ಪ ಇದೇ ಮೊದಲ ಬಾರಿ ಮುಖ್ಯಮಂತ್ರಿ ಆದವರಲ್ಲ. ನಾಲ್ಕು ಬಾರಿ ಮುಖ್ಯಮಂತ್ರಿ ಆಗಿರುವವರು. ಖಾತೆ ಕ್ಯಾತೆ ಸರ್ವೇ ಸಾಮಾನ್ಯ. ಮುಖ್ಯಮಂತ್ರಿ ಅಳೆದು ತೂಗಿ ಖಾತೆ ಹಂಚಿಕೆ ಮಾಡಿದ್ದಾರೆ. ಯಾರಿಗೆ ಯಾವ ಖಾತೆ ಕೊಡಬೇಕೊ ಅದನ್ನು ಕೊಟ್ಟಿದ್ದಾರೆ’ ಎಂದು ಸಮರ್ಥನೆ ನೀಡಿದರು.</p>.<p>ಸಮರ್ಥ ವಿರೋಧ ಪಕ್ಷ ಇಲ್ಲ: ‘ರಾಜ್ಯದಲ್ಲಿ ಸಮರ್ಥವಾದ ವಿರೋಧ ಪಕ್ಷವೇ ಇಲ್ಲ. ಕಾಂಗ್ರೆಸ್ ಅಧಿಕಾರ ನಡೆಸಿದ ಸಂದರ್ಭದಲ್ಲಿ ವೀರಪ್ಪ ಮೊಯಿಲಿಯವರ ಬಟ್ಟೆ ಹರಿದು ಹಾಕಿ ಓಡಿಸಿದ್ದರು. ತಮ್ಮ ತಟ್ಟೆಯಲ್ಲಿ ಹೆಗ್ಗಣವಿದ್ದರೂ ನಮ್ಮ ತಟ್ಟೆಯ ನೊಣ ತೋರಿಸುವ ಯತ್ನವನ್ನು ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ’ ಎಂದು ಲೇವಡಿ ಮಾಡಿದರು.</p>.<p>ರೈತರಪರ ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿಕ್ರಿಯಿಸಿದ ಅವರು, ‘ಇಷ್ಟು ದಿನ ಕಾಂಗ್ರೆಸ್ ನಾಯಕರು ಮಲಗಿದ್ದರು. ಆದರೆ, ಈಗ ಎದ್ದು ಬಂದಿದ್ದಾರೆ’ ಎಂದು ಅಶೋಕ್ ವಾಗ್ದಾಳಿ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>