<p><strong>ಬೆಳಗಾವಿ:</strong> ಹಿಂದೂ ಹಾಗೂ ಮುಸ್ಲಿಂ ಧರ್ಮೀಯರ ಸ್ಮಶಾನಗಳಿಗೆ ತೆರಳಲು ರಸ್ತೆ ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿ ಸವದತ್ತಿ ತಾಲ್ಲೂಕಿನ ಏಣಗಿ ಗ್ರಾಮಸ್ಥರು ಸೋಮವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಶವ ಇಟ್ಟು ಧರಣಿ ನಡೆಸಿದರು.</p>.<p>ಏಣಗಿಯ ಅಬ್ದುಲ್ ಖಾದರ್ ಮಿಶ್ರಿಕೋಟಿ (65) ಎನ್ನುವವರು ಸೋಮವಾರ ನಸುಕಿನಲ್ಲಿ ನಿಧನರಾದರು. ಆದರೆ ಅವರ ಶವ ಸಂಸ್ಕಾರಕ್ಕೆ ಸ್ಮಶಾನಕ್ಕೆ ಹೋಗಲು ಮಾರ್ಗಮಧ್ಯೆ ಇರುವ ಹೊಲಗಳ ರೈತರು ತಕರಾರು ಮಾಡಿದರು.</p>.<p>ಇದರಿಂದ ರೋಸಿಹೋದ ಜನ, ಶವವನ್ನು ವಾಹನದಲ್ಲಿ ಹಾಕಿಕೊಂಡು ಜಿಲ್ಲಾಧಿಕಾರಿ ಕಚೇರಿಗೆ ಬಂದು ಕುಳಿತರು.ಮೃತರ ಸಂಬಂಧಿ ಇಬ್ರಾಹಿಂ ನೇತೃತ್ವದಲ್ಲಿ ಧರಣಿ ನಡೆಸಿದ ಗ್ರಾಮಸ್ಥರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.</p>.<p>ಸ್ಮಶಾನಕ್ಕೆ ಹಾದಿ ಕೊಡದ ಜಿಲ್ಲಾಡಳಿತಕ್ಕೂ ಧಿಕ್ಕಾರ ಹಾಕಿದರು.</p>.<p>'ಊರಿನಲ್ಲಿ ಹಿಂದೂ, ಮುಸ್ಲಿಂ ಎರಡೂ ಸಮುದಾಯದ ಸ್ಮಶಾನಗಳಿಗೆ ತೆರಳಲು ಹಾದಿ ಇಲ್ಲ. ಹಲವು ಬಾರಿ ಮನವಿ ಮಾಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ಜಿಲ್ಲಾಧಿಕಾರಿ ಕಚೇರಿಗೆ ಮೃತದೇಹ ತಂದು ಪ್ರತಿಭಟನೆ ಮಾಡುವುದು ಅನಿವಾರ್ಯವಾಯಿತು'ಎಂದು ಮೃತರ ಸಂಬಂಧಿ ಇಬ್ರಾಹಿಂ ಕಿಡಿ ಕಾರಿದರು.</p>.<p>ಜಿಲ್ಲಾಧಿಕಾರಿ ತಕ್ಷಣಕ್ಕೆ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಇಲ್ಲೇ ಸಮಾಧಿ ಮಾಡುತ್ತೇವೆ ಎಂದೂ ಪಟ್ಟು ಹಿಡಿದರು.</p>.<p><strong>ಜಿಲ್ಲಾಧಿಕಾರಿ ಭರವಸೆ:</strong>ಸ್ಥಳಕ್ಕೆ ಧಾವಿಸಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮೂರು ದಿನಗಳಲ್ಲಿ ಸ್ಮಶಾನಗಳಿಗೆ ರಸ್ತೆ ಮಾಡಿ ಕೊಡುವುದಾಗಿ ಭರವಸೆ ನೀಡಿದರು.</p>.<p>ಈ ದಾರಿಗೆ ಮೂರು ಹೆಕ್ಟೇರ್ ಜಮೀನು ಅಗತ್ಯವಿದೆ. ರೈತರ ಮನವೊಲಿಸಿ ಭೂಸ್ವಾಧೀನ ಮಾಡಿಕೊಂಡು ರಸ್ತೆ ನಿರ್ಮಾಣ ಮಾಡಲಾಗುವುದು. ಅಲ್ಲಿಯವರೆಗೆ ತಹಶೀಲ್ದಾರ್ ಹಾಗೂ ಉಪವಿಭಾಗಾಧಿಕಾರಿ ನೇತೃತ್ವದಲ್ಲಿ ಶವ ಸಾಗಿಸಲು ಅನುಕೂಲ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಭರವಸೆ ನೀಡಿದರು.</p>.<p><strong>ರೈತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು</strong><br />ಜಿಲ್ಲಾಧಿಕಾರಿ ಭರವಸೆ ನೀಡಿದ ನಂತರ ಗ್ರಾಮಸ್ಥರು ಧರಣಿ ಹಿಂಪಡೆದು, ಗ್ರಾಮಕ್ಕೆ ಮರಳಲು ಸಿದ್ಧರಾದರು. ಆಗ ಸ್ಥಳಕ್ಕೆ ಬಂದ ಕೆಲವು ರೈತ ಮುಖಂಡರು ಹೋರಾಟ ಆರಂಭಿಸಿದರು.</p>.<p>ಸ್ಮಶಾನ ದಾರಿ ಮಾಡಿಕೊಡುವವರೆಗೂ ಶವವನ್ನು ಎತ್ತುವುದಿಲ್ಲ, ಜಿಲ್ಲಾಧಿಕಾರಿ ಕಚೇರಿ ಮುಂದೆಯೇ ದಪನ್ ಮಾಡುತ್ತೇವೆ ಎಂದು ಕೂಗಾಡಿದರು.</p>.<p>ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ಮಧ್ಯೆ ಮಾತಿನ ಚಕಮಕಿ ನಡೆಯಿತು.ಕೊನೆಗೆ ಜಯಶ್ರೀ ಗುರೆನ್ನವರ, ಅಶೋಕ ಯಮಕನಮರಡಿ ಸೇರಿದಂತೆ ಕೆಲವರನ್ನು ಪೊಲೀಸರು ವಶಕ್ಕೆ ಪಡೆದರು.ಪೊಲೀಸ್ ವಾಹನ ಹತ್ತಲು ನಿರಾಕರಿಸಿದವರನ್ನು ಕೊರಳಪಟ್ಟಿ ಹಿಡಿದು ಒಳಗೆ ತೆಳ್ಳಿದರು.</p>.<p>ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ರಾಜ್ಯಸಚಿವ ಸೋಮಪ್ರಕಾಶ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಸೋಮವಾರ ಜಿಲ್ಲಾ ಪ್ರವಾಸ ಕೈಗೊಂಡಿದ್ದರಿಂದ ಜಿಲ್ಲಾಧಿಕಾರಿ ಕಚೇರಿ ಸುತ್ತ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.</p>.<p>ವಿಷಯ ಸಚಿವರ ಗಮನಕ್ಕೆ ಬರುವ ಮುನ್ನವೇ ಅಧಿಕಾರಿಗಳು ಪ್ರತಿಭಟನಾಕಾರರನ್ನು ಎಬ್ಬಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಹಿಂದೂ ಹಾಗೂ ಮುಸ್ಲಿಂ ಧರ್ಮೀಯರ ಸ್ಮಶಾನಗಳಿಗೆ ತೆರಳಲು ರಸ್ತೆ ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿ ಸವದತ್ತಿ ತಾಲ್ಲೂಕಿನ ಏಣಗಿ ಗ್ರಾಮಸ್ಥರು ಸೋಮವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಶವ ಇಟ್ಟು ಧರಣಿ ನಡೆಸಿದರು.</p>.<p>ಏಣಗಿಯ ಅಬ್ದುಲ್ ಖಾದರ್ ಮಿಶ್ರಿಕೋಟಿ (65) ಎನ್ನುವವರು ಸೋಮವಾರ ನಸುಕಿನಲ್ಲಿ ನಿಧನರಾದರು. ಆದರೆ ಅವರ ಶವ ಸಂಸ್ಕಾರಕ್ಕೆ ಸ್ಮಶಾನಕ್ಕೆ ಹೋಗಲು ಮಾರ್ಗಮಧ್ಯೆ ಇರುವ ಹೊಲಗಳ ರೈತರು ತಕರಾರು ಮಾಡಿದರು.</p>.<p>ಇದರಿಂದ ರೋಸಿಹೋದ ಜನ, ಶವವನ್ನು ವಾಹನದಲ್ಲಿ ಹಾಕಿಕೊಂಡು ಜಿಲ್ಲಾಧಿಕಾರಿ ಕಚೇರಿಗೆ ಬಂದು ಕುಳಿತರು.ಮೃತರ ಸಂಬಂಧಿ ಇಬ್ರಾಹಿಂ ನೇತೃತ್ವದಲ್ಲಿ ಧರಣಿ ನಡೆಸಿದ ಗ್ರಾಮಸ್ಥರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.</p>.<p>ಸ್ಮಶಾನಕ್ಕೆ ಹಾದಿ ಕೊಡದ ಜಿಲ್ಲಾಡಳಿತಕ್ಕೂ ಧಿಕ್ಕಾರ ಹಾಕಿದರು.</p>.<p>'ಊರಿನಲ್ಲಿ ಹಿಂದೂ, ಮುಸ್ಲಿಂ ಎರಡೂ ಸಮುದಾಯದ ಸ್ಮಶಾನಗಳಿಗೆ ತೆರಳಲು ಹಾದಿ ಇಲ್ಲ. ಹಲವು ಬಾರಿ ಮನವಿ ಮಾಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ಜಿಲ್ಲಾಧಿಕಾರಿ ಕಚೇರಿಗೆ ಮೃತದೇಹ ತಂದು ಪ್ರತಿಭಟನೆ ಮಾಡುವುದು ಅನಿವಾರ್ಯವಾಯಿತು'ಎಂದು ಮೃತರ ಸಂಬಂಧಿ ಇಬ್ರಾಹಿಂ ಕಿಡಿ ಕಾರಿದರು.</p>.<p>ಜಿಲ್ಲಾಧಿಕಾರಿ ತಕ್ಷಣಕ್ಕೆ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಇಲ್ಲೇ ಸಮಾಧಿ ಮಾಡುತ್ತೇವೆ ಎಂದೂ ಪಟ್ಟು ಹಿಡಿದರು.</p>.<p><strong>ಜಿಲ್ಲಾಧಿಕಾರಿ ಭರವಸೆ:</strong>ಸ್ಥಳಕ್ಕೆ ಧಾವಿಸಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮೂರು ದಿನಗಳಲ್ಲಿ ಸ್ಮಶಾನಗಳಿಗೆ ರಸ್ತೆ ಮಾಡಿ ಕೊಡುವುದಾಗಿ ಭರವಸೆ ನೀಡಿದರು.</p>.<p>ಈ ದಾರಿಗೆ ಮೂರು ಹೆಕ್ಟೇರ್ ಜಮೀನು ಅಗತ್ಯವಿದೆ. ರೈತರ ಮನವೊಲಿಸಿ ಭೂಸ್ವಾಧೀನ ಮಾಡಿಕೊಂಡು ರಸ್ತೆ ನಿರ್ಮಾಣ ಮಾಡಲಾಗುವುದು. ಅಲ್ಲಿಯವರೆಗೆ ತಹಶೀಲ್ದಾರ್ ಹಾಗೂ ಉಪವಿಭಾಗಾಧಿಕಾರಿ ನೇತೃತ್ವದಲ್ಲಿ ಶವ ಸಾಗಿಸಲು ಅನುಕೂಲ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಭರವಸೆ ನೀಡಿದರು.</p>.<p><strong>ರೈತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು</strong><br />ಜಿಲ್ಲಾಧಿಕಾರಿ ಭರವಸೆ ನೀಡಿದ ನಂತರ ಗ್ರಾಮಸ್ಥರು ಧರಣಿ ಹಿಂಪಡೆದು, ಗ್ರಾಮಕ್ಕೆ ಮರಳಲು ಸಿದ್ಧರಾದರು. ಆಗ ಸ್ಥಳಕ್ಕೆ ಬಂದ ಕೆಲವು ರೈತ ಮುಖಂಡರು ಹೋರಾಟ ಆರಂಭಿಸಿದರು.</p>.<p>ಸ್ಮಶಾನ ದಾರಿ ಮಾಡಿಕೊಡುವವರೆಗೂ ಶವವನ್ನು ಎತ್ತುವುದಿಲ್ಲ, ಜಿಲ್ಲಾಧಿಕಾರಿ ಕಚೇರಿ ಮುಂದೆಯೇ ದಪನ್ ಮಾಡುತ್ತೇವೆ ಎಂದು ಕೂಗಾಡಿದರು.</p>.<p>ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ಮಧ್ಯೆ ಮಾತಿನ ಚಕಮಕಿ ನಡೆಯಿತು.ಕೊನೆಗೆ ಜಯಶ್ರೀ ಗುರೆನ್ನವರ, ಅಶೋಕ ಯಮಕನಮರಡಿ ಸೇರಿದಂತೆ ಕೆಲವರನ್ನು ಪೊಲೀಸರು ವಶಕ್ಕೆ ಪಡೆದರು.ಪೊಲೀಸ್ ವಾಹನ ಹತ್ತಲು ನಿರಾಕರಿಸಿದವರನ್ನು ಕೊರಳಪಟ್ಟಿ ಹಿಡಿದು ಒಳಗೆ ತೆಳ್ಳಿದರು.</p>.<p>ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ರಾಜ್ಯಸಚಿವ ಸೋಮಪ್ರಕಾಶ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಸೋಮವಾರ ಜಿಲ್ಲಾ ಪ್ರವಾಸ ಕೈಗೊಂಡಿದ್ದರಿಂದ ಜಿಲ್ಲಾಧಿಕಾರಿ ಕಚೇರಿ ಸುತ್ತ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.</p>.<p>ವಿಷಯ ಸಚಿವರ ಗಮನಕ್ಕೆ ಬರುವ ಮುನ್ನವೇ ಅಧಿಕಾರಿಗಳು ಪ್ರತಿಭಟನಾಕಾರರನ್ನು ಎಬ್ಬಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>