‘ಘಟನೆ ನಡೆದ ಭಾಗದಲ್ಲಿ ಆರೋಪಿ ಪ್ರಭಾವಿ ವ್ಯಕ್ತಿ ಆಗಿರುವ ಕಾರಣ ಸಾಕ್ಷ್ಯ ನಾಶ ಮಾಡುವ ಸಾಧ್ಯತೆ ಇದೆ. ಜಾಮೀನು ಕೋರಿ ಪದೇ ಪದೇ ಅರ್ಜಿ ಸಲ್ಲಿಸುತ್ತಿರುವ ವಿನಯ ಕುಲಕರ್ಣಿ, ಅರ್ಜಿ ಪರಿಗಣಿಸಲು ಪೂರಕವಾದ ಯಾವುದೇ ಹೊಸ ಅಂಶಗಳನ್ನು ಒದಗಿಸಿಲ್ಲ’ ಎಂದು ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಪೀಠ ಅಭಿಪ್ರಾಯಪಟ್ಟಿದೆ.