ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿನಯ ಕುಲಕರ್ಣಿ ಬಂಧನ ಬಿಜೆಪಿಯ ರಾಜಕೀಯ ಪಿತೂರಿ –ಸುರ್ಜೇವಾಲ

Last Updated 7 ನವೆಂಬರ್ 2020, 11:12 IST
ಅಕ್ಷರ ಗಾತ್ರ

ಬೆಂಗಳೂರು: ‘ಸಿಬಿಐಯನ್ನು ತನ್ನ ಕೈಗೊಂಬೆಯಾಗಿ ಮಾಡಿಕೊಂಡು ಬಿಜೆಪಿ ಸರ್ಕಾರ ನಮ್ಮ ಪಕ್ಷದ ನಾಯಕ ವಿನಯ ಕುಲಕರ್ಣಿ ಅವರನ್ನು ಬಂಧಿಸಿದೆ. ಸರ್ಕಾರದ ಈ ನಡೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮತ್ತು ಬಿಜೆಪಿಯ ರಾಜಕೀಯ ಪಿತೂರಿಯನ್ನು ಎತ್ತಿ ತೋರಿಸುತ್ತದೆ’ ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಆರೋಪಿಸಿದ್ದಾರೆ.

ಟ್ವೀಟ್‌ ಮಾಡಿವ ಅವರು, ‘ಕಾಂಗ್ರೆಸ್ ನಾಯಕರು ಇಂಥ ಬೆದರಿಕೆಯ ತಂತ್ರಗಳಿಗೆ ಎಂದಿಗೂ ಜಗ್ಗುವುದಿಲ್ಲ ಎಂಬುದನ್ನು ಯಡಿಯೂರಪ್ಪನವರು ಅರ್ಥ ಮಾಡಿಕೊಳ್ಳಬೇಕು. ಅಸ್ಥಿರ ಯಡಿಯೂರಪ್ಪ ಸರ್ಕಾರ ತನ್ನ ಮುಂಚೂಣಿ ಘಟಕಗಳಾದ ಸಿಬಿಐ ಮತ್ತು ಇಡಿ ಬಳಸಿಕೊಂಡು ಪಕ್ಷದ ಮುಖಂಡರಾದ ಡಿ.ಕೆ. ಶಿವಕುಮಾರ್‌, ಜಿ. ಪರಮೇಶ್ವರ, ವಿನಯ ಕುಲಕರ್ಣಿ ಸೇರಿದಂತೆ ಇತರ ನಾಯಕರನ್ನು ಹಣಿಯಲು ಯತ್ನಿಸುತ್ತಿದೆ’ ಎಂದೂ ದೂರಿದ್ದಾರೆ.

‘ಈ ತಂತ್ರಗಳು ಜನರಿಗಾಗಿ ಹೋರಾಡುವ ನಮ್ಮ ಸಂಕಲ್ಪವನ್ನು ಇನ್ನಷ್ಟು ಗಟ್ಟಿಗೊಳಿಸುತ್ತವೆ ಎಂಬುದನ್ನು ಬಿಜೆಪಿ ನೆನಪಿನಲ್ಲಿಡಬೇಕು’ ಎಂದೂ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT