‘ಸಂಘದ ಪದಾಧಿಕಾರಿಗಳ ನಡುವೆ ಭಿನ್ನಾಭಿಪ್ರಾಯ ಉಂಟಾಗಿದ್ದ ಕಾರಣದಿಂದ ಹಿಂದಿನ ಕಾರ್ಯಕಾರಿ ಸಮಿತಿಯನ್ನು ಪದಚ್ಯುತಿಗೊಳಿಸಲಾಗಿತ್ತು. ಸಂಘದ ಕಾರ್ಯಗಳ ನಿರ್ವಹಣೆಗೆ ನಿವೃತ್ತ ಐಎಎಸ್ ಅಧಿಕಾರಿ ಎಂ.ಕೆ.ಶಂಕರಲಿಂಗೇಗೌಡ ಅವರನ್ನು ಸರ್ಕಾರ ನೇಮಿಸಿತ್ತು. ಕಾನೂನಿನ ಪ್ರಕಾರ ಆಡಳಿತಾಧಿಕಾರಿ ಅವಧಿ ಆರು ತಿಂಗಳು ಮಾತ್ರ. ಅಷ್ಟರಲ್ಲಿ ಚುನಾವಣೆ ನಡೆಸಬೇಕು. ಆದರೆ, ಎರಡೂವರೆ ವರ್ಷಗಳಿಂದ ಆಡಳಿತಾಧಿಕಾರಿ ಅವಧಿ ವಿಸ್ತರಣೆ ಮಾಡಿಕೊಂಡೇ ಬರಲಾಗುತ್ತಿದೆ. ಚುನಾವಣೆ ನಡೆಸುತ್ತಿಲ್ಲ’ ಎಂದು ಅರ್ಜಿದಾರರ ಪರ ವಕೀಲ ಧರ್ಮಪಾಲಗೌಡ ವಾದ ಮಂಡಿಸಿದರು.