ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಕ್ಕಲಿಗರ ಮೀಸಲಾತಿ ಹೋರಾಟ: ರಾಜಕೀಯ ಹಿತಾಸಕ್ತಿ ಇಲ್ಲ

Last Updated 24 ಡಿಸೆಂಬರ್ 2022, 22:00 IST
ಅಕ್ಷರ ಗಾತ್ರ

ರಾಮನಗರ: ‘ಒಕ್ಕಲಿಗರಿಗೆ ಮೀಸಲಾತಿ ಬೇಕು ಎನ್ನುವುದು ಸಮುದಾಯದ ಜನರ ಬೇಡಿಕೆಯಾಗಿದ್ದು ಇದರ ಹಿಂದೆ ಯಾವುದೇ ರಾಜಕೀಯ ಹಿತಾಸಕ್ತಿ ಇಲ್ಲ’ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.

ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿರುವ ಕುರಿತು ರಾಮನಗರದಲ್ಲಿ ಶನಿವಾರ ಪತ್ರಕರ್ತರಿಗೆ ಅವರು ಪ್ರತಿಕ್ರಿಯೆ ನೀಡಿದರು. ‘ಒಕ್ಕಲಿಗ ಸಮುದಾಯಕ್ಕೆ ಹಲವು ಸಮಸ್ಯೆಗಳಿವೆ. ಗ್ರಾಮೀಣ ಭಾಗದಲ್ಲಿ ಸಾಕಷ್ಟು ಮಂದಿ ಜಮೀನು ಕಳೆದುಕೊಂಡಿದ್ದಾರೆ. ಈ ಎಲ್ಲದನ್ನೂ ಗಮನಿಸಿ ಸರ್ಕಾರ ನಿರ್ಧಾರ ಕೈಗೊಳ್ಳಬೇಕಿದೆ. ನಿರ್ಮಲಾನಂದನಾಥ ಶ್ರೀಗಳು ಸಹ ಕಳೆದ ಒಂದೂವರೆ ವರ್ಷದಿಂದ ಈ ಬಗ್ಗೆ ಹೋರಾಟ ಮಾಡುತ್ತಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT