ನಗರ ಪ್ರದೇಶದ ಒಕ್ಕಲಿಗರಲ್ಲಿ ಬಡವರಿಗೆ ಆರ್ಥಿಕವಾಗಿ ಹಿಂದುಳಿದಿರುವವರ (ಇಡಬ್ಲ್ಯುಎಸ್) ಕೋಟಾ ಅಡಿಯಲ್ಲಿ ಮೀಸಲಾತಿ ಕಲ್ಪಿಸುವ ರಾಜ್ಯ ಸರ್ಕಾರದ ತೀರ್ಮಾನ ಶ್ಲಾಘನೀಯವಾದುದು. ಆದರೆ, ಜನಸಂಖ್ಯೆಗೆ ಅನುಗುಣವಾಗಿ ಸಮುದಾಯಕ್ಕೆ ಮೀಸಲಾತಿ ನೀಡಲು ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಜನಸಂಖ್ಯೆ ಆಧಾರದಲ್ಲಿ ಒಕ್ಕಲಿಗರಿಗೆ ಮೀಸಲಾತಿ ನೀಡುವಂತೆ ಆಗ್ರಹಿಸಿ ಸ್ವಾಮೀಜಿಗಳ ಮಾರ್ಗದರ್ಶನದಲ್ಲಿ ಒಕ್ಕಲಿಗರ ಸಂಘದಿಂದ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.