<p><strong>ಹುಬ್ಬಳ್ಳಿ: </strong>ಚುನಾವಣಾ ಆಯೋಗದ ನೇತೃತ್ವದಲ್ಲಿಯೇ ಮತದಾರರ ಪಟ್ಟಿ ಪರಿಷ್ಕರಣೆ ನಡೆಯುತ್ತಿದೆ.ಅಲ್ಪಸಂಖ್ಯಾತರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗುತ್ತಿದೆ ಎನ್ನುವುದು ಸುಳ್ಳು. ಒಬ್ಬರ ಹೆಸರು 2-3 ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿದ್ದರೆ, ಮತದಾರರು ಅಧಿಕೃತವಾಗಿ ವಾಸವಿರುವ ಕ್ಷೇತ್ರದಲ್ಲಿ ಮಾತ್ರ ಹೆಸರು ಉಳಿಸಿಕೊಳ್ಳಲಾಗುತ್ತಿದೆ. ಉಳಿದೆಡೆ ತೆಗೆಯಲಾಗುತ್ತಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಕೆಲವರ ಹೆಸರುಗಳನ್ನು ಅನಧಿಕೃತವಾಗಿ ಹುಬ್ಬಳ್ಳಿ, ಬೆಂಗಳೂರು ಮತದಾರರ ಪಟ್ಟಿಯಲ್ಲಿ ಕಂಡು ಬಂದಿದೆ. ಇಂತಹವನ್ನು ಪರಿಷ್ಕರಿಸಲಾಗುತ್ತಿದ್ದು, ಈ ಈ ಕೆಲಸವನ್ನು ಆಯೋಗ ಮಾಡುತ್ತಿವೆ’ ಎಂದು ಅವರು ತಿಳಿಸಿದರು.</p>.<p>‘ಚುನಾವಣಾ ಆಯೋಗ ದೂರು ನೀಡಿದಲ್ಲೆಲ್ಲ ರಾಜ್ಯ ಸರ್ಕಾರದ ಅಧಿಕಾರಿಗಳಿಂದ ತನಿಖೆ ಮಾಡಿಸಲಾಗುವುದು’ ಎಂದು ಅವರು ಹೇಳಿದರು.</p>.<p class="Subhead">ಎಫ್ಐಆರ್ನಲ್ಲಿ ದೋಷ: ‘ಮೂವರು ಯುವಕರ ಮೇಲಷ್ಟೇ ಎಫ್ಐಆರ್ ದಾಖಲಿಸಿ ಪ್ರಕರಣ ಮುಚ್ಚಿಹಾಕುವ ಕೆಲಸ ನಡೆಯುತ್ತಿದೆ. ಇತರರು ಎಂದು ಎಫ್ಐಆರ್ನಲ್ಲಿ ಉಲ್ಲೇಖ ಮಾಡಬೇಕಿತ್ತು. ಪೊಲೀಸರೂ ಕಂಪನಿ ಜೊತೆ ಭಾಗಿಯಾಗಿದ್ದು, ಆಯೋಗ ಸ್ವತಂತ್ರವಾಗಿ ತನಿಖೆ ನಡೆಸಬೇಕು’ ಎಂದು ದೂರುದಾರ ರಜತ ಉಳ್ಳಾಗಡ್ಡಿಮಠ ಅವರು ಒತ್ತಾಯಿಸಿದರು.</p>.<p class="Subhead"><strong>***</strong></p>.<p class="Subhead">ಚುನಾವಣಾ ಆಯೋಗವು ಮತದಾರರ ಕರಡು ಪಟ್ಟಿ ಪ್ರಕಟಿಸಿದ್ದು, ಇದನ್ನು ಪರಿಶೀಲಿಸಲು ಪಕ್ಷದ ಕಾರ್ಯಕರ್ತರಿಂದ ಸಮೀಕ್ಷೆ ಮಾಡಿಸಲಾಗುತ್ತಿದೆ.</p>.<p class="Subhead"><strong>- ಅರವಿಂದ ಬೆಲ್ಲದ, ಶಾಸಕ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ಚುನಾವಣಾ ಆಯೋಗದ ನೇತೃತ್ವದಲ್ಲಿಯೇ ಮತದಾರರ ಪಟ್ಟಿ ಪರಿಷ್ಕರಣೆ ನಡೆಯುತ್ತಿದೆ.ಅಲ್ಪಸಂಖ್ಯಾತರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗುತ್ತಿದೆ ಎನ್ನುವುದು ಸುಳ್ಳು. ಒಬ್ಬರ ಹೆಸರು 2-3 ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿದ್ದರೆ, ಮತದಾರರು ಅಧಿಕೃತವಾಗಿ ವಾಸವಿರುವ ಕ್ಷೇತ್ರದಲ್ಲಿ ಮಾತ್ರ ಹೆಸರು ಉಳಿಸಿಕೊಳ್ಳಲಾಗುತ್ತಿದೆ. ಉಳಿದೆಡೆ ತೆಗೆಯಲಾಗುತ್ತಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಕೆಲವರ ಹೆಸರುಗಳನ್ನು ಅನಧಿಕೃತವಾಗಿ ಹುಬ್ಬಳ್ಳಿ, ಬೆಂಗಳೂರು ಮತದಾರರ ಪಟ್ಟಿಯಲ್ಲಿ ಕಂಡು ಬಂದಿದೆ. ಇಂತಹವನ್ನು ಪರಿಷ್ಕರಿಸಲಾಗುತ್ತಿದ್ದು, ಈ ಈ ಕೆಲಸವನ್ನು ಆಯೋಗ ಮಾಡುತ್ತಿವೆ’ ಎಂದು ಅವರು ತಿಳಿಸಿದರು.</p>.<p>‘ಚುನಾವಣಾ ಆಯೋಗ ದೂರು ನೀಡಿದಲ್ಲೆಲ್ಲ ರಾಜ್ಯ ಸರ್ಕಾರದ ಅಧಿಕಾರಿಗಳಿಂದ ತನಿಖೆ ಮಾಡಿಸಲಾಗುವುದು’ ಎಂದು ಅವರು ಹೇಳಿದರು.</p>.<p class="Subhead">ಎಫ್ಐಆರ್ನಲ್ಲಿ ದೋಷ: ‘ಮೂವರು ಯುವಕರ ಮೇಲಷ್ಟೇ ಎಫ್ಐಆರ್ ದಾಖಲಿಸಿ ಪ್ರಕರಣ ಮುಚ್ಚಿಹಾಕುವ ಕೆಲಸ ನಡೆಯುತ್ತಿದೆ. ಇತರರು ಎಂದು ಎಫ್ಐಆರ್ನಲ್ಲಿ ಉಲ್ಲೇಖ ಮಾಡಬೇಕಿತ್ತು. ಪೊಲೀಸರೂ ಕಂಪನಿ ಜೊತೆ ಭಾಗಿಯಾಗಿದ್ದು, ಆಯೋಗ ಸ್ವತಂತ್ರವಾಗಿ ತನಿಖೆ ನಡೆಸಬೇಕು’ ಎಂದು ದೂರುದಾರ ರಜತ ಉಳ್ಳಾಗಡ್ಡಿಮಠ ಅವರು ಒತ್ತಾಯಿಸಿದರು.</p>.<p class="Subhead"><strong>***</strong></p>.<p class="Subhead">ಚುನಾವಣಾ ಆಯೋಗವು ಮತದಾರರ ಕರಡು ಪಟ್ಟಿ ಪ್ರಕಟಿಸಿದ್ದು, ಇದನ್ನು ಪರಿಶೀಲಿಸಲು ಪಕ್ಷದ ಕಾರ್ಯಕರ್ತರಿಂದ ಸಮೀಕ್ಷೆ ಮಾಡಿಸಲಾಗುತ್ತಿದೆ.</p>.<p class="Subhead"><strong>- ಅರವಿಂದ ಬೆಲ್ಲದ, ಶಾಸಕ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>