ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣಾ ಆಯೋಗದಿಂದಲೇ ಪಟ್ಟಿ ಪರಿಷ್ಕರಣೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

‘ಆಯೋಗದಿಂದಲೇ ಪಟ್ಟಿ ಪರಿಷ್ಕರಣೆ’
Last Updated 2 ಡಿಸೆಂಬರ್ 2022, 17:31 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಚುನಾವಣಾ ಆಯೋಗದ ನೇತೃತ್ವದಲ್ಲಿಯೇ ಮತದಾರರ ಪಟ್ಟಿ ಪರಿಷ್ಕರಣೆ ನಡೆಯುತ್ತಿದೆ.ಅಲ್ಪಸಂಖ್ಯಾತರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗುತ್ತಿದೆ ಎನ್ನುವುದು ಸುಳ್ಳು. ಒಬ್ಬರ ಹೆಸರು 2-3 ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿದ್ದರೆ, ಮತದಾರರು ಅಧಿಕೃತವಾಗಿ ವಾಸವಿರುವ ಕ್ಷೇತ್ರದಲ್ಲಿ ಮಾತ್ರ ಹೆಸರು ಉಳಿಸಿಕೊಳ್ಳಲಾಗುತ್ತಿದೆ. ಉಳಿದೆಡೆ ತೆಗೆಯಲಾಗುತ್ತಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಕೆಲವರ ಹೆಸರುಗಳನ್ನು ಅನಧಿಕೃತವಾಗಿ ಹುಬ್ಬಳ್ಳಿ, ಬೆಂಗಳೂರು ಮತದಾರರ ಪಟ್ಟಿಯಲ್ಲಿ ಕಂಡು ಬಂದಿದೆ. ಇಂತಹವನ್ನು ಪರಿಷ್ಕರಿಸಲಾಗುತ್ತಿದ್ದು, ಈ ಈ ಕೆಲಸವನ್ನು ಆಯೋಗ ಮಾಡುತ್ತಿವೆ’ ಎಂದು ಅವರು ತಿಳಿಸಿದರು.

‘ಚುನಾವಣಾ ಆಯೋಗ ದೂರು ನೀಡಿದಲ್ಲೆಲ್ಲ ರಾಜ್ಯ ಸರ್ಕಾರದ ಅಧಿಕಾರಿಗಳಿಂದ ತನಿಖೆ ಮಾಡಿಸಲಾಗುವುದು’ ಎಂದು ಅವರು ಹೇಳಿದರು.

ಎಫ್‌ಐಆರ್‌ನಲ್ಲಿ ದೋಷ: ‘ಮೂವರು ಯುವಕರ ಮೇಲಷ್ಟೇ ಎಫ್‌ಐಆರ್ ದಾಖಲಿಸಿ ಪ್ರಕರಣ ಮುಚ್ಚಿಹಾಕುವ ಕೆಲಸ ನಡೆಯುತ್ತಿದೆ. ಇತರರು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖ ಮಾಡಬೇಕಿತ್ತು. ಪೊಲೀಸರೂ ಕಂಪನಿ ಜೊತೆ ಭಾಗಿಯಾಗಿದ್ದು, ಆಯೋಗ ಸ್ವತಂತ್ರವಾಗಿ ತನಿಖೆ ನಡೆಸಬೇಕು’ ಎಂದು ದೂರುದಾರ ರಜತ ಉಳ್ಳಾಗಡ್ಡಿಮಠ ಅವರು ಒತ್ತಾಯಿಸಿದರು.

***

ಚುನಾವಣಾ ಆಯೋಗವು ಮತದಾರರ ಕರಡು ಪಟ್ಟಿ ಪ್ರಕಟಿಸಿದ್ದು, ಇದನ್ನು ಪರಿಶೀಲಿಸಲು ಪಕ್ಷದ ಕಾರ್ಯಕರ್ತರಿಂದ ಸಮೀಕ್ಷೆ ಮಾಡಿಸಲಾಗುತ್ತಿದೆ.

- ಅರವಿಂದ ಬೆಲ್ಲದ, ಶಾಸಕ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT