‘ಬೆಳಗಾವಿ, ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಬಂದಿದೆ. ಕಲಬುರ್ಗಿಯಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚಿನ ಸ್ಥಾನಗಳಲ್ಲಿ ಜಯಭೇರಿ ಬಾರಿಸಿದೆ. ಈ ಮೂರು ಹಾಗೂ ಬಳ್ಳಾರಿ ಪಾಲಿಕೆಗೆ ಕೂಡಲೇ ಮೇಯರ್, ಉಪಮೇಯರ್ ಆಯ್ಕೆ ಪ್ರಕ್ರಿಯೆ ನಡೆಸಬೇಕು. ಎಲ್ಲಿ ಬಿಜೆಪಿಗೆ ಕಡಿಮೆ ಸ್ಥಾನಗಳು ಬಂದಿವೆಯೋ ಅಂತಹ ಕಡೆಗಳಲ್ಲಿ ‘ಆಪ್ರೇಷನ್ ಕಮಲ’ ನಡೆಸಿ, ಪ್ರಜಾಪ್ರಭುತ್ವ, ಸಂವಿಧಾನಕ್ಕೆ ದ್ರೋಹ ಬಗೆದು ಅಧಿಕಾರಕ್ಕೆ ಬರುವ ಕೆಲಸ ಮಾಡಬಾರದು. ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಸ್ಪದ ಕೊಡಬಾರದು’ ಎಂದು ಹಕ್ಕೊತ್ತಾಯ ಮಾಡಿದರು.