<p><strong>ಬೆಂಗಳೂರು</strong>: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಸೆಮಿಸ್ಟರ್ ಹಾಗೂ ಮುಖ್ಯ ಪರೀಕ್ಷೆಗಳಲ್ಲಿ ಅನುತ್ತೀರ್ಣ ರಾದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗಳನ್ನು ನಡೆಸಲು ಯೋಜನೆ ರೂಪಿಸುತ್ತಿದೆ. </p>.<p>ಸ್ವಾಯತ್ತ ಕಾಲೇಜುಗಳು, ಖಾಸಗಿ ವಿ.ವಿಗಳಲ್ಲಿ ಈ ವ್ಯವಸ್ಥೆ ಈಗಾಗಲೇ ಜಾರಿಯಲ್ಲಿದೆ. ವಿಟಿಯುನಲ್ಲೂ ಜಾರಿಗೆ ತಂದರೆ ವಿಶ್ವವಿದ್ಯಾಲಯದ ಅಧೀನ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಫಲಿತಾಂಶ<br />ಗಳನ್ನು ಪ್ರಕಟಿಸಿದ ಒಂದು ತಿಂಗಳ ಒಳಗೆ ಪರೀಕ್ಷೆಗೆ ಹಾಜರಾಗಲು ಅವಕಾಶ ಸಿಗಲಿದೆ. ಪರೀಕ್ಷೆಯನ್ನು ತೆಗೆದುಕೊಳ್ಳಲು ಆಸಕ್ತಿ ಹೊಂದಿರುವವರಿಗೆ ತ್ವರಿತ ತರಗತಿಗಳನ್ನೂ ನಡೆಸಲಾಗುತ್ತದೆ.</p>.<p>ಸೆಮಿಸ್ಟರ್ ಫಲಿತಾಂಶಗಳ ಪ್ರಕಟಣೆಯ ನಂತರ ವಿದ್ಯಾರ್ಥಿಗಳು ಅನುತ್ತೀರ್ಣ ಅಂಕಪಟ್ಟಿ ಬದಲು, ಪೂರಕ ಪರೀಕ್ಷೆಯ ಫಲಿತಾಂಶದ ನಂತರವೇ ಅಂತಿಮ ಅಂಕಪಟ್ಟಿ ಪಡೆಯಬಹುದು. </p>.<p>ತರಗತಿಗಳಿಗೆ ಹಾಜರಾದವರು, ಆಂತರಿಕ ಮೌಲ್ಯಮಾಪನದಲ್ಲಿ ಶೇ 90 ಅಂಕ ಪಡೆದವರು, ಆರೋಗ್ಯ ಸಮಸ್ಯೆ ಸೇರಿದಂತೆ ವಿವಿಧ ಕಾರಣಗಳಿಗೆ ಪರೀಕ್ಷೆ ಬರೆಯಲು ಸಾಧ್ಯವಾಗದವರಿಗೆ ಸ್ವಾಯತ್ತ ಕಾಲೇಜುಗಳಲ್ಲಿ ಈ ಅವಕಾಶ ಒದಗಿಸಲಾಗುತ್ತಿದೆ. ಈ ಕುರಿತು ನಿರ್ಧಾರಗಳನ್ನು ತೆಗೆದುಕೊಳ್ಳಲು ಸಮಿತಿಯನ್ನೂ ರಚಿಸಿಕೊಂಡಿವೆ.</p>.<p>‘ಪೂರಕ ಪರೀಕ್ಷೆಗಳನ್ನು ಜಾರಿಗೊಳಿಸುವ ಕುರಿತು ಚರ್ಚೆ ನಡೆದಿದೆ. ವಿದ್ಯಾರ್ಥಿಗಳ ವಲಯದಿಂದಲೂ ಒತ್ತಾಯವಿದೆ. ವಿದ್ಯಾವಿಷಯಕ ಪರಿಷತ್, ಸಿಂಡಿಕೇಟ್ನಲ್ಲಿ ಮಂಡಿಸಿ, ಅಂತಿಮ ನಿರ್ಧಾರ ಪ್ರಕಟಿಸುತ್ತೇವೆ’ ಎಂದು ವಿಟಿಯು ಕಲಪತಿ ವಿದ್ಯಾಶಂಕರ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಸೆಮಿಸ್ಟರ್ ಹಾಗೂ ಮುಖ್ಯ ಪರೀಕ್ಷೆಗಳಲ್ಲಿ ಅನುತ್ತೀರ್ಣ ರಾದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗಳನ್ನು ನಡೆಸಲು ಯೋಜನೆ ರೂಪಿಸುತ್ತಿದೆ. </p>.<p>ಸ್ವಾಯತ್ತ ಕಾಲೇಜುಗಳು, ಖಾಸಗಿ ವಿ.ವಿಗಳಲ್ಲಿ ಈ ವ್ಯವಸ್ಥೆ ಈಗಾಗಲೇ ಜಾರಿಯಲ್ಲಿದೆ. ವಿಟಿಯುನಲ್ಲೂ ಜಾರಿಗೆ ತಂದರೆ ವಿಶ್ವವಿದ್ಯಾಲಯದ ಅಧೀನ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಫಲಿತಾಂಶ<br />ಗಳನ್ನು ಪ್ರಕಟಿಸಿದ ಒಂದು ತಿಂಗಳ ಒಳಗೆ ಪರೀಕ್ಷೆಗೆ ಹಾಜರಾಗಲು ಅವಕಾಶ ಸಿಗಲಿದೆ. ಪರೀಕ್ಷೆಯನ್ನು ತೆಗೆದುಕೊಳ್ಳಲು ಆಸಕ್ತಿ ಹೊಂದಿರುವವರಿಗೆ ತ್ವರಿತ ತರಗತಿಗಳನ್ನೂ ನಡೆಸಲಾಗುತ್ತದೆ.</p>.<p>ಸೆಮಿಸ್ಟರ್ ಫಲಿತಾಂಶಗಳ ಪ್ರಕಟಣೆಯ ನಂತರ ವಿದ್ಯಾರ್ಥಿಗಳು ಅನುತ್ತೀರ್ಣ ಅಂಕಪಟ್ಟಿ ಬದಲು, ಪೂರಕ ಪರೀಕ್ಷೆಯ ಫಲಿತಾಂಶದ ನಂತರವೇ ಅಂತಿಮ ಅಂಕಪಟ್ಟಿ ಪಡೆಯಬಹುದು. </p>.<p>ತರಗತಿಗಳಿಗೆ ಹಾಜರಾದವರು, ಆಂತರಿಕ ಮೌಲ್ಯಮಾಪನದಲ್ಲಿ ಶೇ 90 ಅಂಕ ಪಡೆದವರು, ಆರೋಗ್ಯ ಸಮಸ್ಯೆ ಸೇರಿದಂತೆ ವಿವಿಧ ಕಾರಣಗಳಿಗೆ ಪರೀಕ್ಷೆ ಬರೆಯಲು ಸಾಧ್ಯವಾಗದವರಿಗೆ ಸ್ವಾಯತ್ತ ಕಾಲೇಜುಗಳಲ್ಲಿ ಈ ಅವಕಾಶ ಒದಗಿಸಲಾಗುತ್ತಿದೆ. ಈ ಕುರಿತು ನಿರ್ಧಾರಗಳನ್ನು ತೆಗೆದುಕೊಳ್ಳಲು ಸಮಿತಿಯನ್ನೂ ರಚಿಸಿಕೊಂಡಿವೆ.</p>.<p>‘ಪೂರಕ ಪರೀಕ್ಷೆಗಳನ್ನು ಜಾರಿಗೊಳಿಸುವ ಕುರಿತು ಚರ್ಚೆ ನಡೆದಿದೆ. ವಿದ್ಯಾರ್ಥಿಗಳ ವಲಯದಿಂದಲೂ ಒತ್ತಾಯವಿದೆ. ವಿದ್ಯಾವಿಷಯಕ ಪರಿಷತ್, ಸಿಂಡಿಕೇಟ್ನಲ್ಲಿ ಮಂಡಿಸಿ, ಅಂತಿಮ ನಿರ್ಧಾರ ಪ್ರಕಟಿಸುತ್ತೇವೆ’ ಎಂದು ವಿಟಿಯು ಕಲಪತಿ ವಿದ್ಯಾಶಂಕರ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>