<p><strong>ಬೆಂಗಳೂರು: </strong>ಕಾಡು ಪ್ರಾಣಿಗಳ ಹಾವಳಿ ತಡೆಯಲು ಅರಣ್ಯ ಪ್ರದೇಶದ ಅಂಚಿನಲ್ಲಿ ತಡೆಗೋಡೆ ಮತ್ತು ಹೊಂಡಗಳನ್ನು ನಿರ್ಮಿಸಲಾಗುವುದು ಎಂದು ಅರಣ್ಯ ಸಚಿವ ಆನಂದ್ ಸಿಂಗ್ ತಿಳಿಸಿದರು.</p>.<p>ವಿಕಾಸಸೌಧದಲ್ಲಿ ‘ಕೊಡಗು ಮಾನವ– ವನ್ಯಜೀವಿ ಸಂಘರ್ಷ ಉಪಶಮನ ಪ್ರತಿಷ್ಠಾನ’ ಆಡಳಿತ ಮಂಡಳಿಯ ಸಭೆ ನಡೆಸಿ ಮಾತನಾಡಿದರು.</p>.<p>‘ಕೊಡಗು ಜಿಲ್ಲೆಯಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದೆ. ಇದರಿಂದ ಬೆಳೆ ಹಾನಿಯಾಗಿದ್ದು, ಕೃಷಿಕರಿಗೆ ಸಮಸ್ಯೆಯಾಗುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಇದನ್ನು ತಡೆಗಟ್ಟುನ ನಿಟ್ಟಿನಲ್ಲಿ ಕಾಡು ಪ್ರಾಣಿಗಳು ತೋಟಗಳಿಗೆ ನುಗ್ಗದಂತೆ ಅರಣ್ಯ ಪ್ರದೇಶದ ಅಂಚಿನಲ್ಲಿ ತಡೆಗೋಡೆ ಹಾಗೂ ಹೊಂಡಗಳನ್ನು ನಿರ್ಮಿಸಲಾಗುವುದು’ ಎಂದು ಹೇಳಿದರು.</p>.<p>ಕೊಡಗು ಜಿಲ್ಲೆಯಲ್ಲಿ ಪ್ರವಾಸಿ ತಾಣಗಳು ಹೆಚ್ಚಾಗಿರುವುದರಿಂದ ಅಧಿಕ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಹೀಗಾಗಿ ಪ್ರವಾಸಿ ತಾಣಗಳಲ್ಲಿ ಸ್ವಚ್ಛತೆ ಕಾಪಾಡುವುದು ಮುಖ್ಯ. ಈ ಭಾಗಗಳಲ್ಲಿ ಸಾರ್ವಜನಿಕ ಶೌಚಾಲಯಗಳನ್ನು ಸ್ವಚ್ಛವಾಗಿ ಇಡುವಂತೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಅಭಿವೃದ್ಧಿ ಕಾರ್ಯಗಳು ಸುಸ್ಥಿರವಾಗಿರಬೇಕು. ಪ್ರವಾಸಿ ತಾಣಗಳಲ್ಲಿ ಸೇತುವೆಗಳ<br />ಅಭಿವೃದ್ಧಿಯಾಗಬೇಕು. ಮರದ ಅಥವಾ ಕಬ್ಬಿಣದ ಸೇತುವೆಗಳಿಂದ ಅಪಾಯ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುವ ಕಾರಣಕ್ಕೆ ಕಾಂಕ್ರೀಟ್ ಸೇತುವೆಗಳನ್ನು ನಿರ್ಮಾಣ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p class="Subhead">ಪ್ರಾಣಿಗಳ ಸೆರೆಗೆ ಫೈಬರ್ ಗೇಜ್, ನೆಟ್ ಬಳಕೆ: ಕಾಡು ಪ್ರಾಣಿಗಳನ್ನು ಸೆರೆ ಹಿಡಿಯುವಾಗ ಅವುಗಳಿಗೆ ಗಾಯಗಳಾಗದಂತೆ ಫೈಬರ್ ಗೇಜ್ ಹಾಗೂ ನೆಟ್ಗಳನ್ನು ಬಳಸಬೇಕು. ಆಕಸ್ಮಿಕವಾಗಿ ಗಾಯಗಳಾದಲ್ಲಿ ಸೂಕ್ತ ಚಿಕಿತ್ಸೆ ನೀಡುವ ಮೂಲಕ ಅವುಗಳನ್ನು ರಕ್ಷಣೆ ಮಾಡುವಂತೆಯೂ ತಿಳಿಸಿದರು.</p>.<p>ಸಭೆಯಲ್ಲಿ ಶಾಸಕರಾದ ಕೆ.ಜಿ. ಬೋಪಯ್ಯ, ಅಪ್ಪಚ್ಚು ರಂಜನ್, ಇಲಾಖೆಯ ಪ್ರಧಾನ ಕಾರ್ಯದರ್ಶಿ ವಿಜಯ್ ಕುಮಾರ್ ಗೋಗಿ, ಮುಖ್ಯ ಅರಣ್ಯ ಸಂರಕ್ಷಣಾ ಅಧಿಕಾರಿ ಸಂಜಯ್ ಮೋಹನ್, ಉಪ ಸಂರಕ್ಷಣಾ ಅಧಿಕಾರಿ ಪ್ರಭಾಕರನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕಾಡು ಪ್ರಾಣಿಗಳ ಹಾವಳಿ ತಡೆಯಲು ಅರಣ್ಯ ಪ್ರದೇಶದ ಅಂಚಿನಲ್ಲಿ ತಡೆಗೋಡೆ ಮತ್ತು ಹೊಂಡಗಳನ್ನು ನಿರ್ಮಿಸಲಾಗುವುದು ಎಂದು ಅರಣ್ಯ ಸಚಿವ ಆನಂದ್ ಸಿಂಗ್ ತಿಳಿಸಿದರು.</p>.<p>ವಿಕಾಸಸೌಧದಲ್ಲಿ ‘ಕೊಡಗು ಮಾನವ– ವನ್ಯಜೀವಿ ಸಂಘರ್ಷ ಉಪಶಮನ ಪ್ರತಿಷ್ಠಾನ’ ಆಡಳಿತ ಮಂಡಳಿಯ ಸಭೆ ನಡೆಸಿ ಮಾತನಾಡಿದರು.</p>.<p>‘ಕೊಡಗು ಜಿಲ್ಲೆಯಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದೆ. ಇದರಿಂದ ಬೆಳೆ ಹಾನಿಯಾಗಿದ್ದು, ಕೃಷಿಕರಿಗೆ ಸಮಸ್ಯೆಯಾಗುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಇದನ್ನು ತಡೆಗಟ್ಟುನ ನಿಟ್ಟಿನಲ್ಲಿ ಕಾಡು ಪ್ರಾಣಿಗಳು ತೋಟಗಳಿಗೆ ನುಗ್ಗದಂತೆ ಅರಣ್ಯ ಪ್ರದೇಶದ ಅಂಚಿನಲ್ಲಿ ತಡೆಗೋಡೆ ಹಾಗೂ ಹೊಂಡಗಳನ್ನು ನಿರ್ಮಿಸಲಾಗುವುದು’ ಎಂದು ಹೇಳಿದರು.</p>.<p>ಕೊಡಗು ಜಿಲ್ಲೆಯಲ್ಲಿ ಪ್ರವಾಸಿ ತಾಣಗಳು ಹೆಚ್ಚಾಗಿರುವುದರಿಂದ ಅಧಿಕ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಹೀಗಾಗಿ ಪ್ರವಾಸಿ ತಾಣಗಳಲ್ಲಿ ಸ್ವಚ್ಛತೆ ಕಾಪಾಡುವುದು ಮುಖ್ಯ. ಈ ಭಾಗಗಳಲ್ಲಿ ಸಾರ್ವಜನಿಕ ಶೌಚಾಲಯಗಳನ್ನು ಸ್ವಚ್ಛವಾಗಿ ಇಡುವಂತೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಅಭಿವೃದ್ಧಿ ಕಾರ್ಯಗಳು ಸುಸ್ಥಿರವಾಗಿರಬೇಕು. ಪ್ರವಾಸಿ ತಾಣಗಳಲ್ಲಿ ಸೇತುವೆಗಳ<br />ಅಭಿವೃದ್ಧಿಯಾಗಬೇಕು. ಮರದ ಅಥವಾ ಕಬ್ಬಿಣದ ಸೇತುವೆಗಳಿಂದ ಅಪಾಯ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುವ ಕಾರಣಕ್ಕೆ ಕಾಂಕ್ರೀಟ್ ಸೇತುವೆಗಳನ್ನು ನಿರ್ಮಾಣ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p class="Subhead">ಪ್ರಾಣಿಗಳ ಸೆರೆಗೆ ಫೈಬರ್ ಗೇಜ್, ನೆಟ್ ಬಳಕೆ: ಕಾಡು ಪ್ರಾಣಿಗಳನ್ನು ಸೆರೆ ಹಿಡಿಯುವಾಗ ಅವುಗಳಿಗೆ ಗಾಯಗಳಾಗದಂತೆ ಫೈಬರ್ ಗೇಜ್ ಹಾಗೂ ನೆಟ್ಗಳನ್ನು ಬಳಸಬೇಕು. ಆಕಸ್ಮಿಕವಾಗಿ ಗಾಯಗಳಾದಲ್ಲಿ ಸೂಕ್ತ ಚಿಕಿತ್ಸೆ ನೀಡುವ ಮೂಲಕ ಅವುಗಳನ್ನು ರಕ್ಷಣೆ ಮಾಡುವಂತೆಯೂ ತಿಳಿಸಿದರು.</p>.<p>ಸಭೆಯಲ್ಲಿ ಶಾಸಕರಾದ ಕೆ.ಜಿ. ಬೋಪಯ್ಯ, ಅಪ್ಪಚ್ಚು ರಂಜನ್, ಇಲಾಖೆಯ ಪ್ರಧಾನ ಕಾರ್ಯದರ್ಶಿ ವಿಜಯ್ ಕುಮಾರ್ ಗೋಗಿ, ಮುಖ್ಯ ಅರಣ್ಯ ಸಂರಕ್ಷಣಾ ಅಧಿಕಾರಿ ಸಂಜಯ್ ಮೋಹನ್, ಉಪ ಸಂರಕ್ಷಣಾ ಅಧಿಕಾರಿ ಪ್ರಭಾಕರನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>