ಈ ಕುರಿತು ಶಿವಕುಮಾರ್ ಅವರು, ಮೆಸ್ಕಾಂ ಎಂ.ಡಿ ಹಾಗೂ ಸುಳ್ಯ ಕಚೇರಿಯ ಅಂದಿನ ಪ್ರಭಾರ ಎಇಇ ಹರೀಶ್ ನಾಯ್ಕ್ ಮೂಲಕ ಸಾಯಿ ಗಿರಿಧರ ವಿರುದ್ಧ ಸುಳ್ಯ ಠಾಣೆಗೆ ದೂರು ನೀಡಿದ್ದರು. ಬಳಿಕ ಗಿರಿಧರ ರೈ ಅವರನ್ನು ಪೊಲೀಸರು ಬಂಧಿಸಿದ್ದರು. ಈ ಪ್ರಕರಣದಲ್ಲಿ ಡಿ.ಕೆ. ಶಿವಕುಮಾರ್ ಸಾಕ್ಷಿಯಾಗಿದ್ದು, ಸಾ ಕ್ಷಿ ಹೇಳಲು ಅವರು ನ್ಯಾಯಾಲಯಕ್ಕೆ ಹಾಜರಾಗಿಲ್ಲ. ಇದನ್ನು ಗಂಭೀರ
ವಾಗಿ ಪರಿಗಣಿಸಿರುವ ನ್ಯಾಯಾಧೀಶರು, ಶಿವಕುಮಾರ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲು ಐಜಿಪಿ ಮತ್ತು ಡಿಐಜಿಗೂ ನೋಟಿಸ್ ಜಾರಿ ಮಾಡುವಂತೆ ಆದೇಶಿಸಿದ್ದಾರೆ. ಮುಂದಿನ ವಿಚಾರಣೆ ಸೆ. 29ರಂದು ನಡೆಯಲಿದೆ.