ಶರಣಾಗಲು ಗಡುವು:ದಿವ್ಯಾ ಹಾಗರಗಿ, ನೀರಾವರಿ ಇಲಾಖೆಯ ಜ್ಯೂನಿಯರ್ ಎಂಜಿನಿಯರ್ ಮಂಜುನಾಥ ಮೇಳಕುಂದಿ, ರವೀಂದ್ರ ಮೇಳಕುಂದಿ, ಜ್ಞಾನಜ್ಯೋತಿ ಶಾಲೆಯ ಪ್ರಾಚಾರ್ಯ ಕಾಶಿನಾಥ, ಶಿಕ್ಷಕಿಯರಾದ ಅರ್ಚನಾ ಹಾಗೂ ಶಾಂತಿಬಾಯಿ ಅವರ ವಿರುದ್ಧಇಲ್ಲಿನ ಮೂರನೇ ಜೆಎಂಎಫ್ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಶ್ರೀವಾಸ್ತವ ಅವರು ಬಂಧನ ವಾರಂಟ್ ಜಾರಿಗೊಳಿಸಿದ್ದಾರೆ. ವಾರದೊಳಗೆ ಸಿಐಡಿ ಪೊಲೀಸರ ಎದುರು ಶರಣಾಗಬೇಕು ಎಂದೂ ಆರೋಪಿಗಳಿಗೆ ಸೂಚಿಸಿದ್ದಾರೆ.