ಬೆಂಗಳೂರು: ಮಲೆನಾಡು, ಕರಾವಳಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಸತತವಾಗಿ ಮಳೆಯಾಗುತ್ತಿರುವುದರಿಂದ ಬಹುತೇಕ ಎಲ್ಲ ಜಲಾಶಯಗಳ ಒಳಹರಿವು ಹೆಚ್ಚಿದ್ದು, ನೀರಿನ ಮಟ್ಟದಲ್ಲಿ ಏರಿಕೆಯಾಗಿದೆ.
ರಾಜ್ಯದ ಬಹುತೇಕ ಜಲಾಶಯಗಳು ತುಂಬಿವೆ. ವಾಡಿಕೆಯಂತೆ ಅಕ್ಟೋಬರ್ ತಿಂಗಳಲ್ಲಿ ತುಂಬಬೇಕಿದ್ದ ಜಲಾಶಯಗಳು ಜುಲೈ ತಿಂಗಳಲ್ಲಿ ತುಂಬಿವೆ.