ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಸ್ಥಳೀಯರು ನೀರು ಬಿಡುವ ಸ್ವಲ್ಪ ಹೊತ್ತಿನ ಮೊದಲೇ ಸೈರನ್ ಮೊಳಗಿಸಬೇಕಿತ್ತು. ಸಾಮಾನ್ಯವಾಗಿ ಈ ಅವಧಿಯಲ್ಲಿ ಸೇತುವೆ ಮೇಲೆ ನೀರು ಹರಿಯುತ್ತಿರಲಿಲ್ಲ. ಒಂದು ವೇಳೆ ಇನ್ನಷ್ಟು ನೀರು ಹರಿದಿದ್ದರೆ ಕೊಚ್ಚಿಕೊಂಡು ಹೋಗುವ ಸಂಭವ ಇತ್ತು. ಜೀವಭಯದಲ್ಲಿ ಒಂದು ಬದಿಯಿಂದ ಮತ್ತೊಂದು ಬದಿಗೆ ಸಂಚರಿಸಬೇಕಾಯಿತು ಎಂದು ಹೇಳಿದ್ದಾರೆ.