ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳು ತಮ್ಮ ವಿರುದ್ಧ ಮಾನ ಹಾನಿಕರ ಸುದ್ದಿ ಪ್ರಕಟಿಸದಂತೆ ನಿರ್ಬಂಧಿಸಬೇಕೆಂದು ಕೋರಿ ಆರು ಸಚಿವರು ನ್ಯಾಯಾಲಯದ ಮೊರೆ ಹೋಗಿರುವುದರ ಬಗ್ಗೆ ಪ್ರತಿಕ್ರಿಯಿಸಿ, ‘ದೃಶ್ಯಗಳನ್ನು ತಿರುಚುವ, ಧ್ವನಿ ನೀಡುವ ಕೆಲಸ ಸುಲಭವಾಗಿ ಮಾಡಬಹುದು. ಸಿನಿಮಾ ಹಿನ್ನೆಲೆಯಿಂದ ಬಂದಿರುವ ನನಗೆ ಆ ಬಗ್ಗೆ ಚೆನ್ನಾಗಿ ಗೊತ್ತು. ಹಾಗಾಗಿ ತಾವು ಕೂಡ ಷಡ್ಯಂತ್ರಕ್ಕೆ ಬಲಿಪಶು ಆಗುತ್ತೇವೆ ಎಂಬ ಭಯದಿಂದ ಕೆಲವರು ನ್ಯಾಯಾಲಯದ ಮೊರೆ ಹೋಗಿದ್ದಾರೆ’ ಎಂದರು.