ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸವಕಲ್ಯಾಣ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ನಾವು ಬದ್ಧ: ಬಸವರಾಜ್ ಬೊಮ್ಮಾಯಿ

Last Updated 2 ಮೇ 2021, 15:06 IST
ಅಕ್ಷರ ಗಾತ್ರ

ಬೆಂಗಳೂರು: ಬಸವಕಲ್ಯಾಣ ಕ್ಷೇತ್ರದ ಉಪಚುನಾವಣೆಯಲ್ಲಿ ನಾವೆಲ್ಲ ಸಂಘಟಿತರಾಗಿ ಹೋರಾಟ ಮಾಡಿದೆವು. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಅಭಿವೃದ್ಧಿಗೆ ಹೆಚ್ಚು ಒತ್ತು ಕೊಟ್ಟರು. ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ನಡೆಸಿದರು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ನಾವು ಎಲ್ಲಾ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡೆವು. ಚುನಾವಣಾ ಉಸ್ತುವಾರಿ ಜವಾಬ್ದಾರಿಯನ್ನು ನಾನು, ಡಿಸಿಎಂ ಲಕ್ಷ್ಮಣ ಸವದಿ, ವಸತಿ ಸಚಿವರಾದ ವಿ. ಸೋಮಣ್ಣ ಹಾಗೂ ಬೀದರ್ ಕ್ಷೇತ್ರದ ಸಂಸದರಾದ ಭಗವಂತ ಖುಬಾ ಸಮನಾಗಿ ಹಂಚಿಕೊಂಡು ಪ್ರಾಮಾಣಿಕವಾಗಿ ನಿರ್ವಹಿಸಿದೆವು. ಜನ ಅಭಿವೃದ್ಧಿಗಾಗಿ ಮತ ಕೊಟ್ಟಿದ್ದಾರೆ ಎಂದಿದ್ದಾರೆ.

ಬಸವಕಲ್ಯಾಣ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ನಾವು ಬದ್ಧರಾಗಿದ್ದೇವೆ. ಬಿಜೆಪಿಯನ್ನು ಗೆಲ್ಲಿಸಿದ ಬಸವಕಲ್ಯಾಣ ಕ್ಷೇತ್ರದ ಜನತೆಗೆ, ಬಿಜೆಪಿ ಕಾರ್ಯಕರ್ತರಿಗೆ ಹಾಗೂ ಚುನಾವಣೆಯಲ್ಲಿ ಗೆದ್ದಿರುವ ಬಿಜೆಪಿ ಅಭ್ಯರ್ಥಿ ಶರಣು ಸಲಗರ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT