ನಾವು ಎಲ್ಲಾ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡೆವು. ಚುನಾವಣಾ ಉಸ್ತುವಾರಿ ಜವಾಬ್ದಾರಿಯನ್ನು ನಾನು, ಡಿಸಿಎಂ ಲಕ್ಷ್ಮಣ ಸವದಿ, ವಸತಿ ಸಚಿವರಾದ ವಿ. ಸೋಮಣ್ಣ ಹಾಗೂ ಬೀದರ್ ಕ್ಷೇತ್ರದ ಸಂಸದರಾದ ಭಗವಂತ ಖುಬಾ ಸಮನಾಗಿ ಹಂಚಿಕೊಂಡು ಪ್ರಾಮಾಣಿಕವಾಗಿ ನಿರ್ವಹಿಸಿದೆವು. ಜನ ಅಭಿವೃದ್ಧಿಗಾಗಿ ಮತ ಕೊಟ್ಟಿದ್ದಾರೆ ಎಂದಿದ್ದಾರೆ.