<p><strong>ವಿಜಯಪುರ: ‘</strong>ಮೀಸಲಾತಿ ತುಪ್ಪವನ್ನು ಸರ್ಕಾರ ಮೂಗಿಗೆ ಸವರಿದ್ದರೇ ವಾಸನೆಯಾದರೂ ನೋಡಬಹುದಿತ್ತು. ಆದರೆ, ಸರ್ಕಾರ ತಲೆಗೆ ತುಪ್ಪ ಸುರಿದಿದೆ. ಹಾಗಾಗಿ ಏನೂ ತಿಳಿಯದೇ ಗೊಂದಲದಲಿದ್ದೇವೆ’ ಎಂದು ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅಸಮದಾನ ವ್ಯಕ್ತಪಡಿಸಿದರು.</p>.<p>ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಡಿ.29ಕ್ಕೆ ಮೀಸಲಾತಿ ನೀಡಿದೆ. ಎಲ್ಲ ಲಿಂಗಾಯತರನ್ನು 2ಡಿ ಗೆ ಸೇರಿಸಿರುವುದು ಬಹಳ ಸಂತೋಷ. ನಮ್ಮ ಹೋರಾಟದಿಂದ ಎಲ್ಲ ಲಿಂಗಾಯರಿಗೂ ಒಳ್ಳೆಯದಾಗಿದ್ದು, ನಾವು ಅದನ್ನು ಸ್ವಾಗತಿಸುತ್ತೇವೆ. ಆದರೆ. ನಿಜವಾದ ಹೋರಾಟ ಮಾಡಿದವರು ಪಂಚಮಸಾಲಿಗಳು. ಕಳದೆ 2 ವರ್ಷದಿಂದ ಮನೆ-ಮಠಗಳನ್ನು ಬಿಟ್ಟು ಹೋರಾಟ ಮಾಡಿದ್ದೇವೆ. ನಮ್ಮ ಪಾಲು ಎಷ್ಟು ಎಂದು ಸ್ಪಷ್ಟತೆ ಇಲ್ಲ. ನಾವು ದುಡಿದಿದ್ದಕ್ಕೆ ಸರ್ಕಾರ ಪ್ರತಿಫಲ ಕೊಡಲಿಲ್ಲ ಎಂದು ಹೇಳಿದರು.</p>.<p>ಬೆಳಗಾವಿಯಲ್ಲಿ ಎರಡು ದಿನಗಳಲ್ಲಿ ರಾಜ್ಯ ಮಟ್ಟದ ಪಂಚಮಸಾಲಿ ಕಾರ್ಯಕಾರಣಿ ಸಭೆಯನ್ನು ಕರೆಯುತ್ತೇವೆ. ಈ ಮೀಸಲಾತಿ ಸ್ವೀಕರಿಸಬೇಕೋ ಅಥವಾ ಬೇಡವೋ ಎಂಬುದರ ಬಗ್ಗೆ ಅಲ್ಲಿ ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳುತ್ತೇವೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ: ‘</strong>ಮೀಸಲಾತಿ ತುಪ್ಪವನ್ನು ಸರ್ಕಾರ ಮೂಗಿಗೆ ಸವರಿದ್ದರೇ ವಾಸನೆಯಾದರೂ ನೋಡಬಹುದಿತ್ತು. ಆದರೆ, ಸರ್ಕಾರ ತಲೆಗೆ ತುಪ್ಪ ಸುರಿದಿದೆ. ಹಾಗಾಗಿ ಏನೂ ತಿಳಿಯದೇ ಗೊಂದಲದಲಿದ್ದೇವೆ’ ಎಂದು ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅಸಮದಾನ ವ್ಯಕ್ತಪಡಿಸಿದರು.</p>.<p>ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಡಿ.29ಕ್ಕೆ ಮೀಸಲಾತಿ ನೀಡಿದೆ. ಎಲ್ಲ ಲಿಂಗಾಯತರನ್ನು 2ಡಿ ಗೆ ಸೇರಿಸಿರುವುದು ಬಹಳ ಸಂತೋಷ. ನಮ್ಮ ಹೋರಾಟದಿಂದ ಎಲ್ಲ ಲಿಂಗಾಯರಿಗೂ ಒಳ್ಳೆಯದಾಗಿದ್ದು, ನಾವು ಅದನ್ನು ಸ್ವಾಗತಿಸುತ್ತೇವೆ. ಆದರೆ. ನಿಜವಾದ ಹೋರಾಟ ಮಾಡಿದವರು ಪಂಚಮಸಾಲಿಗಳು. ಕಳದೆ 2 ವರ್ಷದಿಂದ ಮನೆ-ಮಠಗಳನ್ನು ಬಿಟ್ಟು ಹೋರಾಟ ಮಾಡಿದ್ದೇವೆ. ನಮ್ಮ ಪಾಲು ಎಷ್ಟು ಎಂದು ಸ್ಪಷ್ಟತೆ ಇಲ್ಲ. ನಾವು ದುಡಿದಿದ್ದಕ್ಕೆ ಸರ್ಕಾರ ಪ್ರತಿಫಲ ಕೊಡಲಿಲ್ಲ ಎಂದು ಹೇಳಿದರು.</p>.<p>ಬೆಳಗಾವಿಯಲ್ಲಿ ಎರಡು ದಿನಗಳಲ್ಲಿ ರಾಜ್ಯ ಮಟ್ಟದ ಪಂಚಮಸಾಲಿ ಕಾರ್ಯಕಾರಣಿ ಸಭೆಯನ್ನು ಕರೆಯುತ್ತೇವೆ. ಈ ಮೀಸಲಾತಿ ಸ್ವೀಕರಿಸಬೇಕೋ ಅಥವಾ ಬೇಡವೋ ಎಂಬುದರ ಬಗ್ಗೆ ಅಲ್ಲಿ ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳುತ್ತೇವೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>