ಪ್ರತಿಪಕ್ಷದವರು ಹೀಗೆಯೇ ಆಗಬೇಕು ಎಂಬ ಹಠದ ಧೋರಣೆಯಿಂದ, ಸಭಾಪತಿ ಸ್ಥಾನದ ಘನತೆ ಮರೆತು, ಬಸವರಾಜ ಹೊರಟ್ಟಿ ಅವರೊಂದಿಗೆ ಮಿತಿಮೀರಿ ವರ್ತಿಸಿದ್ದಾರೆ. ಇದು ಹೊರಟ್ಟಿ ಅವರಿಗೆ ನೋವುಂಟು ಮಾಡಿದ್ದರಿಂದಾಗಿ, ರಾಜೀನಾಮೆಗೂ ಅವರು ಮುಂದಾದರು. ನಾನು ಅವರನ್ನು ಸಮಾಧಾನಪಡಿಸಿದೆ. ಬಳಿಕ, ಪ್ರತಿಪಕ್ಷಗಳ ನಾಯಕರು ವಿಷಾದ ವ್ಯಕ್ತಪಡಿಸಿದರು. ಸದನದ ಸಮಯ ಎಲ್ಲರದ್ದು ಎಂದು ಅರಿತು ನಡೆದುಕೊಂಡರೆ, ಇಂತಹ ಘಟನೆಗಳಿಗೆ ಆಸ್ಪದವಿರುವುದಿಲ್ಲ ಎಂದರು.