ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿಗಳಿಗಾಗಿ ಉಕ್ರೇನ್ ಸರ್ಕಾರದ ಜೊತೆ ನಿರಂತರ ಸಂಪರ್ಕ: ವಿದೇಶಾಂಗ ಸಚಿವ

Last Updated 13 ಆಗಸ್ಟ್ 2022, 14:27 IST
ಅಕ್ಷರ ಗಾತ್ರ

ರಾಮನಗರ: ಯುದ್ಧದ ಕಾರಣಕ್ಕೆ ಉಕ್ರೇನ್ ತೊರೆದು ಭಾರತಕ್ಕೆ ವಾಪಸ್ ಆಗಿರುವ ವಿದ್ಯಾರ್ಥಿಗಳ ವಿಚಾರದಲ್ಲಿ ಭಾರತವು ಅಲ್ಲಿನ ಸರ್ಕಾರದ ಜೊತೆ ನಿರಂತರ ಸಂಪರ್ಕದಲ್ಲಿ ಇದೆ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ ತಿಳಿಸಿದರು.

ಒಬ್ಬ ವಿದ್ಯಾರ್ಥಿಯನ್ನು ಹೊರತುಪಡಿಸಿ ಉಳಿದವರೆಲ್ಲರನ್ನೂ ದೇಶಕ್ಕೆ ವಾಪಸ್ ಕರೆತಂದಿದ್ದೇವೆ. ಸದ್ಯ ಉಕ್ರೇನ್ ಈ ವಿದ್ಯಾರ್ಥಿಗಳನ್ನು ವಾಪಸ್ ಕರೆಯಿಸಿಕೊಳ್ಳಲು ಸಾಧ್ಯವಿಲ್ಲ. ಆನ್ ಲೈನ್ ತರಗತಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ಉಕ್ರೇನ್ ಸರ್ಕಾರ ಹೇಳುತ್ತಿದೆ ಎಂದು ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಉಕ್ರೇನ್ ನಿಂದ ವಾಪಸ್ ಆದ ವಿದ್ಯಾರ್ಥಿಗಳಿಗೆ ಭಾರತದಲ್ಲಿ ಓದು ಮುಂದುವರಿಸಲು ಅವಕಾಶ ನೀಡುವ ವಿಚಾರವನ್ನು ಸರ್ಕಾರ ಪರಿಶೀಲಿಸುತ್ತಿದೆ. ಈ ವಿಚಾರದಲ್ಲಿ ಕೆಲವರು ಮೆಟ್ಟಿಲು ಏರಿದ್ದಾರೆ ಎಂದರು.

ಅಮೆರಿಕಾದಲ್ಲಿ ಭಾರತ ಮೂಲದಲೇಖಕ ಸಲ್ಮಾನ್ ರಶ್ದಿ ಮೇಲೆ ದಾಳಿ ಕುರಿತು ಪ್ರತಿಕ್ರಿಯಿಸಿ' ಇದು ಆತಂಕಕಾರಿ ವಿಚಾರ. ಸದ್ಯ ಪ್ರವಾಸದಲ್ಲಿ‌ ಇರುವ ಕಾರಣ ಈ ಬಗ್ಗೆ ವಿವರ ಪಡೆದಿಲ್ಲ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT