‘ಭಾರತ ದೇಶಕ್ಕಾಗಿ ನೀವು ದೆಹಲಿಯಿಂದ ನಡೆಸುತ್ತಿರುವ ಭ್ರಷ್ಟಾಚಾರ ಮುಕ್ತ ಸರ್ಕಾರವು ಇಲ್ಲಿಯೂ ಬೇಕು. ಭ್ರಷ್ಟ ಅಧಿಕಾರಿಗಳನ್ನು ವಜಾಗೊಳಿಸಬೇಕು. ಭ್ರಷ್ಟ ರಾಜಕಾರಣಿಗಳಿಗೆ ಅವಕಾಶಗಳನ್ನು ಕಲ್ಪಿಸದೆ ಮೂಲೆಗುಂಪು ಮಾಡಬೇಕು. ಎಲ್ಲ ಯೋಜನೆಗಳನ್ನು ತ್ವರಿತಗತಿಯಲ್ಲಿ ಅನುಷ್ಠಾನಗೊಳಿಸಬೇಕು. ಭವಿಷ್ಯದಲ್ಲಿ ಉತ್ತಮ ಆಡಳಿತ ದೊರೆಯಲಿ’ ಎಂದು ಅವರು ಆಶಿಸಿದ್ದಾರೆ.