ಖಾತೆ ಹಂಚಿಕೆಗೆ ಸಂಬಂಧಿಸಿದಂತೆ ಸಚಿವರಾದ ಆನಂದ್ ಸಿಂಗ್ ಮತ್ತು ಎಂ.ಟಿ.ಬಿ. ನಾಗರಾಜ್ ಅಸಮಾಧಾನ ಹೊರಹಾಕಿರುವ ಕುರಿತು ಸೋಮವಾರ ವಿಕಾಸಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದ ಅವರು, ‘ಕೆಲವರು ತಮಗೆ ಇಂತಹದ್ದೇ ಖಾತೆ ಬೇಕು ಎಂದು ಬಯಸಿರುತ್ತಾರೆ. ಅದು ಸಿಗದೇ ಇದ್ದಾಗ ಅಸಮಾಧಾನ ಸಹಜ. ಆದರೆ, ಕೊಟ್ಟಿರುವ ಖಾತೆಯಲ್ಲಿ ಕೆಲಸ ಮಾಡುವುದು ಅನಿವಾರ್ಯ’ ಎಂದರು.